ರೈತ ಮುಖಂಡರು-ಕೇಂದ್ರ ಸಚಿವರ ಮಾತುಕತೆ ವಿಫಲ : ದೆಹಲಿ ಚಲೋ ಮೆರವಣಿಗೆ ಆರಂಭ ; 30 ನಿಮಿಷದಲ್ಲಿ ಬ್ಯಾರಿಕೇಡ್‌ ತುಂಡು ಮಾಡ್ತೇವೆ ಎಂದ ರೈತರು

ನವದೆಹಲಿ: ಸೋಮವಾರ ತಡರಾತ್ರಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವಿನ ಮಹತ್ವದ ಸಭೆ ಯಾವುದೇ ನಿರ್ಣಯವಿಲ್ಲದೆ ಅಂತ್ಯಗೊಂಡಿದ್ದು, ರೈತರು ಇಂದು, ಮಂಗಳವಾರ ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು, ಮಂಗಳವಾರ ಬೆಳಗ್ಗೆ 10 ಗಂಟೆಗೆ ‘ದೆಹಲಿ ಚಲೋ’ ಮೆರವಣಿಗೆ ಆರಂಭಗೊಂಡಿದ್ದು, ಪಂಜಾಬ್‌ನ ಸಂಗ್ರೂರ್‌ನಿಂದ ರೈತರು 2,500 ಟ್ರಾಕ್ಟರ್ ಟ್ರಾಲಿಗಳಲ್ಲಿ ಹರಿಯಾಣ ಮೂಲಕ ದೆಹಲಿಗೆ ತೆರಳಿದರು.
ಐದು ಗಂಟೆಗಳ ಕಾಲ ಮಾತುಕತೆ ನಡೆಸಿದರೂ ಪ್ರಮುಖ ಬೇಡಿಕೆಗಳ ಕುರಿತು ಒಪ್ಪಂದಕ್ಕೆ ಬರಲು ಉಭಯ ಪಕ್ಷಗಳು ವಿಫಲವಾದ ನಂತರ ರೈತರು ದೆಹಲಿ ಚಲೋ ಪ್ರತಿಭಟನೆಗೆ ಮುಂದಾಗಿದ್ದಾರೆ. ಆದಾಗ್ಯೂ, ಹೆಚ್ಚಿನ ವಿಷಯಗಳಲ್ಲಿ ಒಮ್ಮತವನ್ನು ಸಾಧಿಸಲಾಗಿದೆ ಮತ್ತು ಸಮಿತಿಯ ರಚನೆಯ ಮೂಲಕ ಇನ್ನು ಕೆಲವನ್ನು ಪರಿಹರಿಸುವ ಸೂತ್ರವನ್ನು ಪ್ರಸ್ತಾಪಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ರೈತರ ಆಂದೋಲನದ ನಿರೀಕ್ಷೆಯಲ್ಲಿ, ದೆಹಲಿ ಪೊಲೀಸರು ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ, ಗುಂಪು ಸೇರುವುದಕ್ಕೆ ನಿರ್ಬಂಧಗಳನ್ನು ಹೇರಿದ್ದಾರೆ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೆಹಲಿ ಗಡಿಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP)ಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರವನ್ನು ಒತ್ತಾಯಿಸುವ ಉದ್ದೇಶದಿಂದ ‘ದೆಹಲಿ ಚಲೋ’ ಮೆರವಣಿಗೆಯಲ್ಲಿ ದೇಶಾದ್ಯಂತ 200 ಕ್ಕೂ ಹೆಚ್ಚು ರೈತ ಸಂಘಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ರೈತರ ಪ್ರತಿಭಟನೆಯ ಪ್ರಮುಖ ಬೆಳವಣಿಗೆಗಳು…
ಕೇಂದ್ರ ಸಚಿವರೊಂದಿಗಿನ ಐದು ಗಂಟೆಗಳ ಮಾತುಕತೆಯು ಯಾವುದೇ ನಿರ್ಣಯಕ್ಕೆ ಬರಲು ವಿಫಲವಾದ ನಂತರ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಅವರು ದೆಹಲಿಗೆ ಮೆರವಣಿಗೆಯ ನಿರ್ಧಾರವನ್ನು ಪ್ರಕಟಿಸಿದರು. “ನಮ್ಮ ಯಾವುದೇ ಬೇಡಿಕೆಗಳ ಬಗ್ಗೆ ಸರ್ಕಾರವು ಗಂಭೀರವಾಗಿದೆ ಎಂದು ನಾವು ಭಾವಿಸುವುದಿಲ್ಲ. ಅವರು ನಮ್ಮ ಬೇಡಿಕೆಗಳನ್ನು ಈಡೇರಿಸಲು ಬಯಸುವುದಿಲ್ಲ ಎಂದು ನಾವು ಭಾವಿಸುತ್ತೇವೆ… ಸರ್ಕಾರವು ನಮಗೆ ಏನನ್ನಾದರೂ ನೀಡಿದ್ದರೆ, ನಾವು ನಮ್ಮ ಆಂದೋಲನವನ್ನು ಮರುಪರಿಶೀಲಿಸಬಹುದಿತ್ತು” ಎಂದು ಪಂಧೇರ್ ಹೇಳಿದ್ದಾರೆ.
ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆಯಲ್ಲಿ ಭಾಗವಹಿಸಿದ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ, ಮಾತುಕತೆಯ ಬಗ್ಗೆ ಆಶಾವಾದವಿದೆ ಎಂದು ಹೇಳಿದ್ದಾರೆ. ಸಮಿತಿಯ ರಚನೆಯ ಮೂಲಕ ಉಳಿದ ಬೇಡಿಕೆಗಳ ಪರಿಹಾರಕ್ಕಾಗಿ ಪ್ರಸ್ತಾವನೆಗಳನ್ನು ಮುಂದಿಡುವುದರೊಂದಿಗೆ ಹೆಚ್ಚಿನ ವಿಷಯಗಳಲ್ಲಿ ಒಮ್ಮತವನ್ನು ಸಾಧಿಸಲಾಗಿದೆ ಎಂದು ಮುಂಡಾ ಹೇಳಿದ್ದಾರೆ ರೈತ ಸಂಘಟನೆಗಳು ಮಾತುಕತೆ ನಡೆಸುವ ಭರವಸೆ ನಮಗಿದೆ ಎಂದರು.

ಪ್ರಮುಖ ಸುದ್ದಿ :-   1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನಕುಮಾರ ದೋಷಿ

2020-21ರ ಆಂದೋಲನದಿಂದ ರೈತರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ಕೇಂದ್ರವು ಒಪ್ಪಿಕೊಂಡಿದೆ ಆದರೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತ್ರಿಗೆ ಒತ್ತಾಯಿಸುವ ರೈತರ ನಾಯಕರ ಮನವೊಲಿಕೆ ಸಾಧ್ಯವಾಗಿಲ್ಲ ಎಂದು ವರದಿಯೊಂದು ಹೇಳಿದೆ.
ದೆಹಲಿಯಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ ಮತ್ತು ನಗರದ ಗಡಿಗಳು ಕೋಟೆಗಳಾಗಿ ಮಾರ್ಪಟ್ಟಿವೆ. ದೆಹಲಿ ಪೊಲೀಸ್ ಕಮಿಷನರ್ ಸಂಜಯ ಅರೋರಾ ಅವರು ಮಾರ್ಚ್ 12 ರವರೆಗೆ ದೊಡ್ಡ ಸಭೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ, ರ್ಯಾಲಿಗಳು, ಟ್ರಾಕ್ಟರ್ ಪ್ರವೇಶ ಮತ್ತು ಶಸ್ತ್ರಾಸ್ತ್ರಗಳು ಅಥವಾ ದಹನಕಾರಿ ವಸ್ತುಗಳನ್ನು ಸಾಗಿಸುವುದನ್ನು ನಿಷೇಧಿಸಿದ್ದಾರೆ.
ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಅಲ್ಲಿ ರಸ್ತೆಗಳನ್ನು ಕಾಂಕ್ರೀಟ್ ಬ್ಲಾಕ್‌ಗಳಿಂದ ನಿರ್ಬಂಧಿಸಲಾಗಿದೆ ಮತ್ತು ಮುಳ್ಳುತಂತಿಯಿಂದ ಭದ್ರಪಡಿಸಲಾಗಿದೆ.
ದೆಹಲಿಯ ಗಡಿಯಲ್ಲಿ ಭಾರೀ ಬ್ಯಾರಿಕೇಡಿಂಗ್‌ ಮಾಡಿದ್ದಕ್ಕೆ ರೈತರು ಹಿಂಜರಿಯುವುದಿಲ್ಲ, “ಅರ್ಧ ಗಂಟೆಯಲ್ಲಿ ಬ್ಯಾರಿಕೇಡ್‌ಗಳನ್ನು ಒಡೆಯುತ್ತೇವೆ” ಎಂದು ರೈತ ನಾಯಕರುಹೇಳುತ್ತಾರೆ.

https://twitter.com/ANI/status/1757256147336131038?ref_src=twsrc%5Etfw%7Ctwcamp%5Etweetembed%7Ctwterm%5E1757256147336131038%7Ctwgr%5Ec50fdbd0eb5228d2d513bc7cc3c882cd4ea76da5%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2024%2Ffeb%2F13%2Ffarmers-protest-chalo-delhi-march-begins-from-fatehgarh-sahib-punjab-haryana-borders-fortified-511908.html

ರೈತರ ಉದ್ದೇಶಿತ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಗಡಿಯ ಸುತ್ತಲೂ ವಾಣಿಜ್ಯ ವಾಹನಗಳಿಗೆ ಸಂಚಾರ ವ್ಯತ್ಯಯ ಮಾಡಲಾಗಿದೆ. ಮಂಗಳವಾರದಿಂದ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಲು ಮತ್ತು ಗಡಿಗಳನ್ನು ತಪ್ಪಿಸಲು ಪೊಲೀಸರು ಸಲಹೆ ನೀಡಿದ್ದಾರೆ. ದೆಹಲಿ ಟ್ರಾಫಿಕ್ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸುವ ಸಲಹೆಯನ್ನು ಭಾನುವಾರ ನೀಡಿದ್ದಾರೆ.
ಅಲ್ಲದೆ, ಹರಿಯಾಣದ ಅಧಿಕಾರಿಗಳು ಪಂಜಾಬ್‌ನೊಂದಿಗಿನ ರಾಜ್ಯದ ಗಡಿಯಲ್ಲಿ ಭದ್ರತೆಯನ್ನು ಬಲಪಡಿಸಿದ್ದಾರೆ. ಅಂಬಾಲಾ, ಜಿಂದ್, ಫತೇಹಾಬಾದ್, ಕುರುಕ್ಷೇತ್ರ, ಮತ್ತು ಸಿರ್ಸಾ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಕಾಂಕ್ರೀಟ್ ಬ್ಲಾಕ್‌ಗಳು, ಮುಳ್ಳುತಂತಿಗಳನ್ನು ಅಳವಡಿಸಿ ರಾಜ್ಯಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಪ್ರತಿಭಟನಾಕಾರರ ಹಾದಿ ಬ್ಲಾಕ್‌ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಸೌರ ವಿದ್ಯುತ್‌ ಚಾಲಿತ 3 ಟವರ್‌ಗಳು, 12 ಅಂತಸ್ತಿನ ಕಟ್ಟಡ, 300 ಕೊಠಡಿಗಳು, ಆಸ್ಪತ್ರೆ, ಸಭಾಂಗಣ ; ದೆಹಲಿಯಲ್ಲಿ 150 ಕೋಟಿ ರೂ.ವೆಚ್ಚದಲ್ಲಿ ನವೀಕರಿಸಿದ ಆರ್‌ ಎಸ್‌ ಎಸ್ ಕಚೇರಿ

ಹರಿಯಾಣದಲ್ಲಿ 64 ಅರೆಸೇನಾಪಡೆ ತಿಕಡಿಗಳು ಮತ್ತು 50 ಹರಿಯಾಣ ಪೊಲೀಸರ ತುಕಡಿಗಳನ್ನು ವಿವಿಧ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ. ಈ ಸಿಬ್ಬಂದಿ ಗಲಭೆ ನಿಗ್ರಹ ಸಾಧನಗಳನ್ನು ಹೊಂದಿದ್ದು, ಗಡಿ ಮತ್ತು ಸೂಕ್ಷ್ಮ ಜಿಲ್ಲೆಗಳಲ್ಲಿ ಠಿಕಾಣಿ ಹೂಡಿದ್ದಾರೆ. ಹೆಚ್ಚುವರಿಯಾಗಿ, ಡ್ರೋನ್ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.
ಇಂದು, ಮಂಗಳವಾರ ಬೆಳಗ್ಗೆ 10 ಗಂಟೆಗೆ ‘ದೆಹಲಿ ಚಲೋ’ ಮೆರವಣಿಗೆ ಆರಂಭಗೊಂಡಿದ್ದು, ಪಂಜಾಬ್‌ನ ಸಂಗ್ರೂರ್‌ನಿಂದ ರೈತರು 2,500 ಟ್ರಾಕ್ಟರ್ ಟ್ರಾಲಿಗಳಲ್ಲಿ ಹರಿಯಾಣ ಮೂಲಕ ದೆಹಲಿಗೆ ತೆರಳಿದರು.
ಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರು, ರೈತ ಮಹಿಳೆಯರ ಮೇಲೆ ಮಧ್ಯಪ್ರದೇಶದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ರೈತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ ಆರೋಪಿಸಿದ್ದಾರೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement