ಹುಲಿ ಉಗುರು ವಿಚಾರದ ಹೇಳಿಕೆ : ವೈಯಕ್ತಿಕ ತೇಜೋವಧೆ ಮಾಡಿದವರ ವಿರುದ್ಧ ಎಫ್‌‌ಐಆರ್‌ ದಾಖಲಿಸಿದ ನಟ ಜಗ್ಗೇಶ

ಬೆಂಗಳೂರು: ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಇತ್ತೀಚೆಗೆ ಹುಲಿ ಉಗುರು ಹಾಕಿಕೊಂಡ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು. ಈಗ ಜಗ್ಗೇಶ ಈ ಬಗ್ಗೆ ಎಫ್‌‌ಐಆರ್‌ ದಾಖಲಿಸಿದ್ದಾರೆ.
ಗುರುಪ್ರಸಾದ ಹಾಗೂ ಜಗ್ಗೇಶ ಅವರ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ʼರಂಗನಾಯಕʼ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹುಲಿ ತರ ಬದುಕಬೇಕು ಎಂದು ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು” ಎಂದು ಜಗ್ಗೇಶ ಹೇಳಿದ್ದರು.

ಜಗ್ಗೇಶ ಅವರು ವರ್ತೂರು ಸಂತೋಷ ಾವರನ್ನು ಉದ್ದೇಶಿಸಿ ʼಕಿತ್ತೋದ್‌ ನನ್ಮಗʼ ಎಂದು ಹೇಳಿದ್ದಾರೆ ಎಂದು ನಂತರ ಕೆಲವರು ಆಕ್ರೋಶ ವ್ಯಕ್ತಪಡಿಸಿ ಅವರ ನಿವಾಸದ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ತಮ್ಮ ವಿಚಾರ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುತ್ತಿರುವವರ ವಿರುದ್ಧ ನಟ ಜಗ್ಗೇಶ ಅವರು ಈಗ ಎಫ್‌ ಐಆರ್‌ ದಾಖಲಿಸಿದ್ದಾರೆ. ಉತ್ತರ ವಿಭಾಗದ ಡಿಸಿಪಿಗೆ ಲಿಖಿತ ರೂಪದಲ್ಲಿ ನಟ ಜಗ್ಗೇಶ ದೂರು ನೀಡಿದ್ದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ರಂಗನಾಯಕ ಸಿನಿಮಾ ಕಾರ್ಯಕ್ರಮದಲ್ಲಿ ಹುಲಿ ಉಗುರು ಬಗ್ಗೆ ಕಿತ್ತೋದವನು ಎಂಬ ಪದವನ್ನು ಗ್ರಾಮೀಣ ಭಾಷೆಯ ಅರ್ಥದಲ್ಲಿ ನಾನು ಹಾಸ್ಯವಾಗಿ ಬಳಸಿದ್ದೆ. ಕೆಟ್ಟ ಪ್ರಚಾರ ಉದ್ದೇಶ ನನ್ನದಾಗಿರಲಿಲ್ಲ. ಆದರೆ ಇದನ್ನೇ ಉಪಯೋಗಿಸಿಕೊಂಡು ಕೆಲವರು ವಿಚಾರ ತಿರುಚಿ ಜಾತಿ ನಿಂದನೆ, ವ್ಯಕ್ತಿ ನಿಂದನೆ ಹಾಗೂ ವೈಯಕ್ತಿಕ ತೇಜೋವಧೆಯನ್ನು ಮಾಡುತ್ತಿದ್ದಾರೆ” ಎಂದು ದೂರಿನಲ್ಲಿ ಜಗ್ಗೇಶ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement