ರಾಯಚೂರು : ಬಸ್‌-ಬೈಕ್‌ ಡಿಕ್ಕಿ ; ಮೂವರು ಸಾವು

ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ತಾಲೂಕಿನ ಮಿಟ್ಟಿ ವಲ್ಕಾಪುರ ಬಳಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ನಗರದ ಇಂದಿರಾ ನಗರದ ನಿವಾಸಿಗಳಾದ ರಾಘವೇಂದ್ರ (28), ಪರಶುರಾಮ (30), ಗೋವಿಂದ (28) ಎಂದು ಗುರುತಿಸಲಾಗಿದೆ.
ಮೂವರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಂತ್ರಾಲಯದಿಂದ ರಾಯಚೂರಿಗೆ ಬರುತ್ತಿದ್ದ ಬಸ್‌ ಡಿಕ್ಕಿಯಾಗಿದೆ, ಬೈಕ್ ಸವಾರರು ಯರಗೇರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವಗಳನ್ನು ರಿಮ್ಸ್ ಸಾಗಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೈಲಹೊಂಗಲ ಶಾಸಕರ ಕಾರು ಅಪಘಾತ

ನಿಮ್ಮ ಕಾಮೆಂಟ್ ಬರೆಯಿರಿ

advertisement