‘ತಪ್ಪು ಮಾಡಿದ್ದೇನೆ….’: ವೀಡಿಯೊ ರಿಟ್ವೀಟ್ ಮಾಡಿದ್ದಕ್ಕೆ ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲ್ ತಪ್ಪೊಪ್ಪಿಗೆ

ನವದೆಹಲಿ: ಯೂ ಟ್ಯೂಬರ್ ಧ್ರುವ ರಾಥಿ ಅವರು ಪೋಸ್ಟ್ ಮಾಡಿದ ಮಾನಹಾನಿಕರ ವೀಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
“ನಾನು ರಿಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ನಾನು ಹೇಳಬಲ್ಲೆ” ಎಂದು ಅವರು ಹೇಳಿದರು. ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ ಮನು ಸಿಂಘ್ವಿ ಅವರು ವಾದ ಮಂಡಿಸಿದ್ದರು.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮಗೆ ನೀಡಲಾಗಿದ್ದ ಸಮನ್ಸ್ ಅನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರನ್ನೊಳಗೊಂಡ ಪೀಠವು ನೋಟಿಸ್ ಜಾರಿ ಮಾಡುವುದನ್ನು ತಡೆಯಿತು. ಬದಲಾಗಿ, ಮುಖ್ಯಮಂತ್ರಿಯ ಕ್ಷಮೆಯಾಚನೆ ಪರಿಗಣಿಸಿ ಈ ಪ್ರಕರಣವನ್ನು ಇಲ್ಲಿಗೆ ಮುಕ್ತಾಯಗೊಳಿಸಲು ಬಯಸುವಿರಾ ಎಂದು ಬಯಸುತ್ತಾರೆಯೇ ಎಂದು ಪೀಠವು ದೂರುದಾರರನ್ನು ಕೇಳಿತು.

ಕೇಜ್ರಿವಾಲ್ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಮಾರ್ಚ್ 11 ರವರೆಗೆ ಮುಂದೂಡುವಂತೆ ಪೀಠವು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಫೆಬ್ರವರಿ 5 ರಂದು ತನ್ನ ತೀರ್ಪಿನಲ್ಲಿ, ದೆಹಲಿ ಹೈಕೋರ್ಟ್ ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್‌ಗೆ ನೀಡಲಾದ ಸಮನ್ಸ್ ಅನ್ನು ರದ್ದುಗೊಳಿಸಲು ನಿರಾಕರಿಸಿತ್ತು. ಅವಹೇಳನಕಾರಿ ವಿಷಯಗಳನ್ನು ಮರುಟ್ವೀಟ್‌ ಮಾಡುವುದು ಕೂಡಾ ಮಾನಹಾನಿ ಕಾನೂನಿನ ಅಡಿ ಕ್ರಮಕ್ಕೆ ಅರ್ಹವಾಗುತ್ತದೆ ಎಂದು ದೆಹಲಿ ಹೈಕೋರ್ಟ್‌ ಫೆಬ್ರುವರಿ 5ರ ತನ್ನ ತೀರ್ಪಿನಲ್ಲಿ ಹೇಳಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು.
‘ಬಿಜೆಪಿ ಐಟಿ ಸೆಲ್ ಭಾಗ II’ ಎಂಬ ವೀಡಿಯೊವನ್ನು ಮೂಲತಃ ಧ್ರುವ ರಾಥಿ ಹಂಚಿಕೊಂಡಿದ್ದರು. ಕೇಜ್ರಿವಾಲ್‌ ಈ ವೀಡಿಯೋವನ್ನು ಮರುಟ್ವೀಟ್ ಮಾಡಿದ್ದರು. ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಸಾಮಾಜಿಕ ಮಾಧ್ಯಮ ಪುಟವನ್ನು ನಡೆಸುತ್ತಿರುವ ವಿಕಾಸ್ ಸಂಸ್ಕೃತ್ಯಾನನ್ ಎಂಬವರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement