ಕೊನೆಗೂ 44 ನಿಗಮ/ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಯಾರಿಗೆ ಯಾವ ನಿಗಮ ಮಂಡಳಿ; ಪಟ್ಟಿ ಇಲ್ಲಿದೆ..

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರ ಮಧ್ಯೆ 44 ನಿಗಮ/ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ನಿಗಮ/ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ.
ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದು, ಬಹಳಷ್ಟು ಸಮಯದಿಂದ ಸುದ್ದಿಯಲ್ಲಿದ್ದ ನಿಗಮ ಮಂಡಳಿ ನೇಮಕಕ್ಕೆ ತೆರೆಬಿದ್ದಿದೆ.
ಯಾರಿಗೆ ಯಾವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ…? (   ಪಿಡಿಎಫ್‌  Board corporation list ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು)
ಕಾಂತಾ ನಾಯ್ಕ– ಅಧ್ಯಕ್ಷರು, ಕೌಶಲ್ಯಾಭಿವೃದ್ಧಿ ನಿಗಮ
ಮುಂಡರಗಿ ನಾಗರಾಜು- ಅಧ್ಯಕ್ಷರು, ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ ಕೆ ಅಸೂಟಿ- ಉಪಾಧ್ಯಕ್ಷರು, ಕರ್ನಾಟಕ ಕ್ರೀಡಾ ಪ್ರಾಧಿಕಾರ
ಬಿ.ಎಚ್ ಹರೀಶ – ಅಧ್ಯಕ್ಷರು, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ
ಡಾ.ಅಂಶುಮಂತ – ಅಧ್ಯಕ್ಷರು, ಭದ್ರಾ ಕಾಡಾ, ಶಿವಮೊಗ್ಗ
ಆಂಜನೇಯಲು ಜೆ.ಎಸ್ – ಅಧ್ಯಕ್ಷರು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ
ಡಾ.ಬಿ ಯೋಗೇಶಬಾಬು – ಅಧ್ಯಕ್ಷರು, ಕರ್ನಾಟಕ ದ್ರಾಕ್ಷಾರಸ ಮಂಡಳಿ
ಮರೀಗೌಡ, ಯಾದಗಿರಿ – ಅಧ್ಯಕ್ಷರು, ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ
ದೇವೇಂದ್ರಪ್ಪ ವರ್ತೂರು- ಅಧ್ಯಕ್ಷರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ರಾಜಶೇಖರ ರಾಮಸ್ವರಂ – ಅಧ್ಯಕ್ಷರು, ಕರ್ನಾಟಕ ಜೈವಿಕ ಇಂಧನ ಮಂಡಳಿ
ಕೆ.ಮರೀಗೌಡ – ಅಧ್ಯಕ್ಷರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ
ಎಸ್ ಮನೋಹರ – ಅಧ್ಯಕ್ಷರು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ – ಅಧ್ಯಕ್ಷರು, ಬಣ್ಣ ಮತ್ತು ಅರಗು ಕಾರ್ಖಾನೆ, ಮೈಸೂರು
ಮಮತಾ ಗಟ್ಟಿ – ಅಧ್ಯಕ್ಷರು, ಗೇರು ಅಭಿವೃದ್ಧಿ ನಿಗಮ
ಪಲ್ಲವಿ ಜಿ.- ಅಧ್ಯಕ್ಷರು, ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ
ಹೆಚ್.ಸಿ ಸುಧೀಂದ್ರ-ಅಧ್ಯಕ್ಷರು, ತೆಂಗು ಅಭಿವೃದ್ಧಿ ಮಂಡಳಿ
ಡಾ.ನಾಗಲಕ್ಷ್ಮೀ ಚೌಧರಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ
ಹೆಚ್.ಎಸ್ ಸುಂದರೇಶ – ಅಧ್ಯಕ್ಷರು, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ
ಆರ್.ಎಂ ಮಂಜುನಾಥ ಗೌಡ – ಅಧ್ಯಕ್ಷರು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ
ಜಯಣ್ಣ- ಅಧ್ಯಕ್ಷರು, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ
ಆರ್ ಸಂಪತರಾಜ- ಅಧ್ಯಕ್ಷರು, ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
ಪದ್ಮಾವತಿ- ಅಧ್ಯಕ್ಷರು, ಮಹಿಳಾ ಅಭಿವೃದ್ಧಿ ನಿಗಮ
ಶ್ರೀನಿವಾಸ – ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಶಾಕಿರ್ ಸನದಿ – ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ
ಸೋಮಣ್ಣ ಬೇವನಿಮರದ- ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ
ಮೆಹಬೂಬ್ ಪಾಷಾ- ಅಧ್ಯಕ್ಷರು, ಕಂಠೀರವ ಸ್ಟುಡಿಯೋ
ಕೀರ್ತಿ ಗಣೇಶ- ಅಧ್ಯಕ್ಷರು, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ಮಜರ್ ಖಾನ್- ಅಧ್ಯಕ್ಷರು, ದೇವರಾಜು ಅರಸು ಟ್ರಕ್ ಟರ್ಮಿನಲ್
ಸವಿತಾ ರಘು- ಅಧ್ಯಕ್ಷರು, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ
ಲಲಿತ್ ರಾಘವ – ಅಧ್ಯಕ್ಷರು, ಕರ್ನಾಟಕ ವಿದ್ಯುತ್ ಕಾರ್ಖಾನೆ
ಜಿ.ಎಸ್. ಮಂಜುನಾಥ– ಉಪಾಧ್ಯಕ್ಷರು, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ
ಮಾಲಾ ನಾರಾಯಣರಾವ್ – ಅಧ್ಯಕ್ಷರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ
ರಿಜ್ವಾನ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
ಕೇಶವ ರೆಡ್ಡಿ- ಅಧ್ಯಕ್ಷರು, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ
ತಾಜ್ ಪೀರ್- ಅಧ್ಯಕ್ಷರು, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ
ಗಂಗಾಧರ- ಅಧ್ಯಕ್ಷರು, ಮೈಸೂರು ಸಕ್ಕರೆ ಕಾರ್ಖಾನೆ
ಅಲ್ತಾಫ್- ಅಧ್ಯಕ್ಷರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಜಯಸಿಂಹ – ಅಧ್ಯಕ್ಷರು, ಬ್ರಾಹ್ಮಣ ಅಭಿವೃದ್ಧಿ ಮಂಡಳಿ
ವಿಜಯ ಕೆ ಮುಳುಗುಂದ- ಅಧ್ಯಕ್ಷರು, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
ಮರಿಸ್ವಾಮಿ, ಚಾಮರಾಜನಗರ- ಅಧ್ಯಕ್ಷರು, ಕಾಡಾ, ಮೈಸೂರು
ಸದಾಶಿವ ಉಲ್ಲಾಳ- ಅಧ್ಯಕ್ಷರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ
ರಘುನಂದನ ರಾಮಣ್ಣ – ಅಧ್ಯಕ್ಷರು, ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಪ್ರಾಧಿಕಾರ
ಬಸವರಾಜ ಜಾಬಶೆಟ್ಟಿ – ಅಧ್ಯಕ್ಷರು, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ
ಸಾಧು ಕೋಕಿಲ – ಅಧ್ಯಕ್ಷರು ಕರ್ನಾಟಕ ಚಲನಚಿತ್ರ ಅಕಾಡೆಮಿ

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement