ಧಾರವಾಡ : ಅಳು ನಿಲ್ಲಿಸದೆ ನಿದ್ದೆ ಹಾಳು ಮಾಡಿತೆಂದು 1 ವರ್ಷದ ಮಗುವನ್ನು ಗೋಡೆಗೆ ಎಸೆದು ಸಾಯಿಸಿದ ತಂದೆ…!

ಧಾರವಾಡ: ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ ಎಂಬಾತ ಕುಡಿತದ ದಾಸನಾಗಿದ್ದು, ಈ ಕಾರಣಕ್ಕೆ ನಿತ್ಯವೂ ದಂಪತಿಯ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈಗ ಈತ ಅಳುತ್ತದೆ ಹಾಗೂ ತನಗೆ ನಿದ್ದೆ ಬರುವುದಿಲ್ಲ ಎಂಬ ಕಾರಣಕ್ಕೆ ಸಿಟ್ಟಿನಲ್ಲಿ ತನ್ನ ಮಗುವನ್ನೇ ಎಸೆದ ಪರಿಣಾಮ ಅದು ನೆಲಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿತ್ತು. ತಕ್ಷಣವೇ ಕುಟುಂಬಸ್ಥರು ಹಾಗೂ ಸಂಬಂಧಿಕರು ಮಗುವನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

ಆರೋಪಿ  ಮನೆಯಲ್ಲಿ ರಾತ್ರಿ ಊಟ ಮುಗಿಸಿ ಮಲಗಿದ್ದಾಗ ರಾತ್ರಿ 10:30ರ ಸುಮಾರಿಗೆ ಮಗು ಅಳಲು ಆರಂಭಿಸಿದಾಗ ಆತನಿಗೆ ಎಚ್ಚರವಾಗಿದ್ದಕ್ಕೆ ಕೋಪ ಬಂದಿದೆ. ಆತ ಅವಾಚ್ಯ ಶಬ್ದಗಳಿಂದ ಬೈಯುತ್ತಾ, ಸಿಟ್ಟಿನಿಂದ ಮಗುವನ್ನು ಗೋಡೆಗೆ ಎಸೆದಿದ್ದಾನೆ. ಇದರಿಂದ ಮಗುವಿನ ತಲೆಗೆ ಗಂಭೀರ ಗಾಯವಾಗಿದ್ದರಿಂದ ಮಗುವನ್ನು ಆತನ ಪತ್ನಿ ತಿಳಿಸಿದ್ದಾರೆ.
ಘಟನೆ ನಡೆದ ಕೂಡಲೇ ಅಕ್ಕಪಕ್ಕದವರು ಮನೆಗೆ ಧಾವಿಸಿ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಶಂಭುಲಿಂಗಯ್ಯ ಶಹಾಪುರಮಠ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಐಪಿಸಿ 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement