ಲೋಕಸಭಾ ಚುನಾವಣೆಗೆ ವಾರಗಳ ಮುಂಚೆ ಚುನಾವಣಾ ಆಯುಕ್ತ ಅರುಣ ಗೋಯೆಲ್ ದಿಢೀರ್‌ ರಾಜೀನಾಮೆ

ನವದೆಹಲಿ: ಅಚ್ಚರಿಯ ನಡೆಯಲ್ಲಿ, ಲೋಕಸಭೆ ಚುನಾವಣೆ ದಿನಾಂಕದ ನಿರೀಕ್ಷಿತ ಘೋಷಣೆಗೆ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ ಗೋಯೆಲ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅರುಣ ಗೋಯೆಲ್ ಅವರ ಅಧಿಕಾರಾವಧಿ ಡಿಸೆಂಬರ್ 2027 ರವರೆಗೆ ಇತ್ತು.
ಗೋಯೆಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ. ಅವರು ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಮಾಜಿ ಅಧಿಕಾರಿ ಮತ್ತು 1985-ಬ್ಯಾಚ್ ಐಎಎಸ್ ಅಧಿಕಾರಿ, ಗೋಯೆಲ್ ಅವರು ನವೆಂಬರ್ 2022 ರಲ್ಲಿ ಚುನಾವಣಾ ಆಯೋಗಕ್ಕೆ ನೇಮಕಗೊಂಡಿದ್ದರು. ಮುಂದಿನ ವರ್ಷ ಫೆಬ್ರವರಿಯಲ್ಲಿ ಹಾಲಿ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವಕುಮಾರ ಅವರು ನಿವೃತ್ತರಾದ ನಂತರ ಗೋಯೆಲ್‌ ಅವರು ಮುಖ್ಯ ಚುನಾವಣಾ ಆಯುಕ್ತ (CEC) ಆಗುತ್ತಿದ್ದರು.

ಫೆಬ್ರವರಿಯಲ್ಲಿ ಅನುಪ ಪಾಂಡೆ ನಿವೃತ್ತರಾದ ನಂತರ ಚುನಾವಣಾ ಸಮಿತಿಯಲ್ಲಿ ಒಂದು ಹುದ್ದೆ ಈಗಾಗಲೇ ಖಾಲಿಯಾಗಿತ್ತು. ಇದೀಗ ಗೋಯೆಲ್ ರಾಜೀನಾಮೆಯೊಂದಿಗೆ ತ್ರಿಸದಸ್ಯ ಚುನಾವಣಾ ಆಯೋಗದ ಸಮಿತಿಯಲ್ಲಿ ಈಗ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವಕುಮಾರ ಮಾತ್ರ ಇದ್ದಾರೆ.
ಹೊಸ ಕಾನೂನಿನ ಪ್ರಕಾರ, ಕಾನೂನು ಸಚಿವರ ನೇತೃತ್ವದ ಮತ್ತು ಇಬ್ಬರು ಕೇಂದ್ರ ಕಾರ್ಯದರ್ಶಿಗಳನ್ನು ಒಳಗೊಂಡ ಶೋಧನಾ ಸಮಿತಿಯು ಸಿಇಸಿ ಅಥವಾ ಇಸಿಗಳ ನೇಮಕಾತಿಗಾಗಿ ಐದು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡುತ್ತದೆ.
ನಂತರ ಪ್ರಧಾನ ಮಂತ್ರಿ ನೇತೃತ್ವದ ಮತ್ತು ಕೇಂದ್ರ ಸಂಪುಟ ಸಚಿವರನ್ನು ಒಳಗೊಂಡಿರುವ ಆಯ್ಕೆ ಸಮಿತಿಯು ಪ್ರಧಾನಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಥವಾ ಸದನದಲ್ಲಿ ಏಕೈಕ ದೊಡ್ಡ ವಿರೋಧ ಪಕ್ಷದ ನಾಯಕರು ಇವರಲ್ಲಿ ಒಬ್ಬರ ಹೆಸರನ್ನು ಆಯ್ಕೆ ಮಾಡುತ್ತಾರೆ. ಮುಖ್ಯ ಚುನಾವಣಾ ಆಯುಕ್ತರು ಅಥವಾ ಚುನಾವಣಾ ಆಯುಕ್ತರನ್ನು ನಂತರ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ.
ಈ ಹಿಂದೆ ಚುನಾವಣಾ ಆಯೋಗವು ಮುಖ್ಯ ಚುನಾವಣಾ ಆಯುಕ್ತರನ್ನು ಮಾತ್ರ ಹೊಂದಿತ್ತು. ಬಹು-ಸದಸ್ಯ ಚುನಾವಣಾ ಆಯೋಗದ ಪರಿಕಲ್ಪನೆಯು 1993 ರಿಂದ ಕಾರ್ಯರೂಪಕ್ಕೆ ಬಂದಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ತನ್ನ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದ್ದನ್ನು ಕೊನೆಗೂ ಬಹಿರಂಗವಾಗಿ ಒಪ್ಪಿಕೊಂಡ ಪಾಕಿಸ್ತಾನ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement