ಲೋಕಸಭೆ ಚುನಾವಣೆಗೂ ಮುನ್ನ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರ್ಕಾರವು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತಂದಿದೆ. ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮುನ್ನವೇ ಈ ಅಧಿಸೂಚನೆ ಹೊರಬಿದ್ದಿದೆ.
ಅರ್ಜಿಗಳನ್ನು ಆನ್‌ಲೈನ್ ಮೋಡ್‌ನಲ್ಲಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ ವೆಬ್ ಪೋರ್ಟಲ್ ಅನ್ನು ಒದಗಿಸಲಾಗಿದೆ.
ಕಳೆದ ತಿಂಗಳು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಂಬಂಧ ನಿಯಮಗಳನ್ನು ಹೊರಡಿಸಿದ ನಂತರ ಈ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದರು.
2019ರ ಡಿಸೆಂಬರ್ 11ರಂದು ಸಂಸತ್ತು ಜಾರಿಗೊಳಿಸಿದ ಸಿಎಎ ಕಾಯ್ದೆ ಭಾರತದಾದ್ಯಂತ ತೀವ್ರ ಚರ್ಚೆಯ ವಿಷಯವಾಗಿದೆ.
ಸಿಎಎ, 1955ರ ಪೌರತ್ವ ಕಾಯ್ದೆಯ ತಿದ್ದುಪಡಿಯಾಗಿದೆ. ಧಾರ್ಮಿಕ ಕಿರುಕುಳವನ್ನು ತಾಳಲಾರದೇ ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ 2014ರ ಡಿಸೆಂಬರ್​ 31ರ ವರೆಗೆ ಭಾರತಕ್ಕೆ ಆಗಮಿಸಿರುವ ಸಿಖ್​, ಬೌದ್ಧರು, ಕ್ರಿಶ್ಚಿಯನ್​, ಜೈನರು ಮತ್ತು ಪಾರ್ಸಿಗಳಿಗೆ ಸಿಎಎ ಅಡಿಯಲ್ಲಿ ಭಾರತದ ಪೌರತ್ವವನ್ನು ನೀಡಲಾಗುತ್ತದೆ.

ವಿಳಂಬವಾದ ಅನುಷ್ಠಾನ

ಪ್ರಮುಖ ಸುದ್ದಿ :-   'ತಾರಕ್ ಮೆಹ್ತಾ' ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

2019ರಲ್ಲಿ ಅಂಗೀಕಾರಗೊಂಡಿದ್ದ ಈ ಕಾನೂನಿಗೆ ರಾಷ್ಟ್ರಪತಿಗಳ ಅಂಕಿತವೂ ಬಿದ್ದಿತ್ತು. ಆದರೆ ದೇಶದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದ ಕಾರಣ ಜಾರಿಗೆ ಅಧಿಸೂಚನೆ ಹೊರಡಿಸಿರಲಿಲ್ಲ. ಅಲ್ಲದೆ, ಸಿಎಎ (CAA)ಯ ಅನುಷ್ಠಾನವು ನಾಲ್ಕು ವರ್ಷಗಳ ಕಾಲ ವಿಳಂಬವಾಯಿತು, ಅದಕ್ಕೆ ಸಂಬಂಧಿಸಿದ ನಿಯಮಗಳ ರಚನೆಯ ಅಗತ್ಯವಿತ್ತು. ವಿಳಂಬದ ಹೊರತಾಗಿಯೂ, ಗೃಹ ವ್ಯವಹಾರಗಳ ಸಚಿವಾಲಯವು ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯನ್ನು ಸಕ್ರಿಯವಾಗಿ ಅನುಸರಿಸುತ್ತಿದೆ.
ಪೌರತ್ವ ನೀಡುವ ಅಧಿಕಾರಿಗಳು
ಒಂಬತ್ತು ರಾಜ್ಯಗಳಾದ್ಯಂತ ಜಿಲ್ಲಾಧಿಕಾರಿಗಳು ಮತ್ತು ಗೃಹ ಕಾರ್ಯದರ್ಶಿಗಳು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳ ಅರ್ಹ ವ್ಯಕ್ತಿಗಳಿಗೆ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರ ಹೊಂದಿದ್ದಾರೆ. ಆದಾಗ್ಯೂ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಂತಹ ಸೂಕ್ಷ್ಮ ಪ್ರದೇಶಗಳಿಗೆ ಇನ್ನೂ ಈ ಅಧಿಕಾರಗಳನ್ನು ನೀಡಲಾಗಿಲ್ಲ.

ಸರ್ಕಾರದ ಅಧಿಸೂಚನೆಯ ನಂತರ, ದೆಹಲಿ ಪೊಲೀಸರು ಕಳೆದ ಬಾರಿ ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಬಿಂದುವಾಗಿದ್ದ ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಏತನ್ಮಧ್ಯೆ, ಸರ್ಕಾರದ ಅಧಿಸೂಚನೆಯ ಸಮಯವನ್ನು ಪ್ರಶ್ನಿಸಿದ ಕಾಂಗ್ರೆಸ್, “ಚುನಾವಣೆಗಳನ್ನು ಧ್ರುವೀಕರಿಸಲು” ಇದನ್ನು ಮಾಡಲಾಗಿದೆ ಎಂದು ಆರೋಪಿಸಿದೆ. “ಡಿಸೆಂಬರ್ 2019 ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ತಿಳಿಸಲು ಮೋದಿ ಸರ್ಕಾರವು ನಾಲ್ಕು ವರ್ಷ ಮತ್ತು ಮೂರು ತಿಂಗಳುಗಳನ್ನು ತೆಗೆದುಕೊಂಡಿದೆ. ತಮ್ಮ ಸರ್ಕಾರವು ಸಮಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿಕೊಳ್ಳುತ್ತಾರೆ. ಸಿಎಎಗೆ ಸಂಬಂಧಿಸಿದ ನಿಯಮಗಳನ್ನು ತಿಳಿಸಲು ತೆಗೆದುಕೊಂಡ ಸಮಯವು ಪ್ರಧಾನಿಯವರ ಹಸಿ ಸುಳ್ಳುಗಳ ಮತ್ತೊಂದು ಪ್ರದರ್ಶನವಾಗಿದೆ ಎಂದು ಕಾಂಗ್ರೆಸ್‌ನ ಸಂವಹನ ಉಸ್ತುವಾರಿ ಜೈರಾಮ ರಮೇಶ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಬಂಧನ

 

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement