ಈ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು…: ಮೂಲಗಳು

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿದೆ.
ಕಳೆದ ವಾರ ಗುಲ್ಬರ್ಗ ಕ್ಷೇತ್ರಕ್ಕೆ ಚರ್ಚಿಸಲಾದ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅವಿರೋಧ ಆಯ್ಕೆಯಾಗಿತ್ತು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಆದರೆ ಇದು ಪಕ್ಷದ ಒಳಗೆ ಹಾಗೂ ಹೊರಗೆ ಹಲವು ಬಗೆಯ ಸಂದೇಶವನ್ನು ರವಾನಿಸಬಹುದು ಎಂಬ ಎಚ್ಚರಿಕೆಯ ಗಂಟೆಯೂ ವ್ಯಕ್ತವಾಗಿದೆ ಎನ್ನಲಾಗಿದೆ. ಯಾಕೆಂದರೆ ಯುದ್ಧಭೂಮಿಗೆ ಸೈನ್ಯ ಇಳಿದಾಗ ಅದರ ಜನರಲ್ ಕಾಣೆಯಾಗಬಾರದು, ಮುಂಭಾಗದಿಂದ ಸೇನೆಯನ್ನು ಮುನ್ನಡೆಸಬೇಕೆಂದು ಕೆಲವರು ಪ್ರತಿಪಾದಿಸುತ್ತಾರೆ. ಆದರೆ ಪಕ್ಷದ ಹಿರಿಯರು ಮುಖ್ಯಸ್ಥರಾದವರು ತಮ್ಮ ಸ್ವಂತ ಪ್ರಚಾರದಲ್ಲಿ ತೊಡಗಿಸಿಕೊಳ್ಳದೆ ದೇಶಾದ್ಯಂತ ಪಕ್ಷವನ್ನು ಮುನ್ನಡೆಸಬೇಕಾಗುತ್ತದೆ ಎಂಬ ಅಂಶವನ್ನು ಸೂಚಿಸಿದ್ದಾರೆ ಎಂದು ವರದಿ ಹೇಳಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರ್ಗಿ ಕ್ಷೇತ್ರದಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು, ಆದರೆ 2019 ರಲ್ಲಿ ಸೋತರು. ನಂತರ ಅವರು ರಾಜ್ಯಸಭೆಗೆ ಆಯ್ಕೆಯಾದರು. ಅಲ್ಲಿ ಅವರು ವಿಪಕ್ಷದ ನಾಯಕರಾಗಿದ್ದಾರೆ. ಅವರಿಗೆ ರಾಜ್ಯಸಭೆಯಲ್ಲಿ ಇನ್ನೂ ನಾಲ್ಕು ವರ್ಷ ಬಾಕಿ ಇದೆ.
ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ವರದಿಗಳು ಹೇಳಿವೆ. ಕಾಂಗ್ರೆಸ್, ವಾಸ್ತವವಾಗಿ, ಸಾರ್ವತ್ರಿಕ ಚುನಾವಣೆಗೆ ಸಚಿವರು ಸ್ಪರ್ಧಿಸುವುದಕ್ಕೆ ಒಲವು ತೋರುತ್ತಿಲ್ಲ ಎಂಬ ವರದಿಗಳಿವೆ.
ತಾವು ಒಂದು ಕ್ಷೇತ್ರಕ್ಕೆ ಸೀಮಿತವಾಗಲು ಬಯಸುವುದಿಲ್ಲ ಆದರೆ ದೇಶಾದ್ಯಂತ ಗಮನ ಕೇಂದ್ರೀಕರಿಸಲು ಬಯಸುವುದಾಗಿ ಖರ್ಗೆ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಪಕ್ಷದ ಮುಖ್ಯಸ್ಥರುಅನೇಕ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಸ್ಪರ್ಧಿಸಿದ್ದಾರೆ ಮತ್ತು ಗೆದ್ದಿದ್ದಾರೆ, ಆದರೆ ರಾಹುಲ್‌ ಗಾಂಧಿ ಅವರು 2019 ರಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ ಪಕ್ಷದ ಭದ್ರಕೋಟೆಯಾದ ಅಮೇಥಿಯಲ್ಲಿ ಸೋಲನುಭವಿಸಿದರು.
ಬಿಜೆಪಿಯಲ್ಲಿಯೂ ಸಹ, ಈ ವರ್ಷ ಜೆಪಿ ನಡ್ಡಾ ಸ್ಪರ್ಧಿಸದಿದ್ದರೂ, 2014 ಮತ್ತು 2019 ರಲ್ಲಿ, ಆಗಿನ ಬಿಜೆಪಿ ಮುಖ್ಯಸ್ಥರಾದ ರಾಜನಾಥ ಸಿಂಗ್ ಮತ್ತು ಅಮಿತ್ ಶಾ ಕ್ರಮವಾಗಿ ಲಕ್ನೋ ಮತ್ತು ಗಾಂಧಿನಗರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು.
ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಕೊನೆಯ ಸಭೆಯಲ್ಲಿ, ಖರ್ಗೆ ಅವರನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಪಕ್ಷಗಳ ಮೈತ್ರಿಕೂಟದ ಪ್ರಧಾನ ಮಂತ್ರಿಯ ಅಭ್ಯರ್ಥಿ ಎಂದು ಬಿಂಬಿಸಿದ್ದರು. ಆದರೆ ಇದಕ್ಕೆ ನಿರಾಕರಿಸಿದ ಖರ್ಗೆ, ಚುನಾವಣೆ ಮುಗಿದ ಮೇಲೆ ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಹೇಳಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement