ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಎಂಟು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು ಬಿಜೆಪಿ ಹೈಕಮಾಂಡ್ ಹೊಸ ಮುಖಗಳಿಗೆ ಮಣೆ ಹಾಕಿದೆ. ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ಮೈಸೂರು-ಪ್ರತಾಪ ಸಿಂಹ, ಬೆಂಗಳೂರು ಉತ್ತರ- ಡಿ.ವಿ. ಸದಾನಂದ ಗೌಡ, ಕೊಪ್ಪಳ- ಕರಡಿ ಸಂಗಣ್ಣ, ಹಾವೇರಿ-ಶಿವಕುಮಾರ ಉದಾಸಿ (ನಿವೃತ್ತಿ ಘೋಷಿಸಿದ್ದರು), ತುಮಕೂರು-ಜಿ.ಎಸ್. ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ-ನಳಿನಕುಮಾರ್ ಕಟೀಲು, ಚಾಮರಾಜನಗರ-ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ- ದೇವೇಂದ್ರಪ್ಪ ಅವರ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡಲಾಗಿದೆ.
ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್..?
ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ ಜೊಲ್ಲೆ
ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
ಹಾವೇರಿ -ಬಸವರಾಜ ಬೊಮ್ಮಾಯಿ
ಮೈಸೂರು -ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ
ಬೆಂಗಳೂರು ಗ್ರಾಮಾಂತರ-ಡಾ.ಸಿ.ಎನ್.ಮಂಜುನಾಥ
ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ
ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ
ತುಮಕೂರು -ವಿ.ಸೋಮಣ್ಣ
ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ ಚೌಟಾ
ಚಾಮರಾಜನಗರ-ಎಸ್.ಬಾಲರಾಜು
ಧಾರವಾಡ-ಪ್ರಹ್ಲಾದ ಜೋಶಿ
ಕೊಪ್ಪಳ -ಡಾ.ಬಸವರಾಜ ತ್ಯಾವಟೂರು
ದಾವಣಗೆರೆ-ಗಾಯತ್ರಿ ಸಿದ್ದೇಶ್ವರ
ಬಳ್ಳಾರಿ-ಬಿ.ಶ್ರೀರಾಮುಲು
ಕಲಬುರಗಿ-ಡಾ.ಉಮೇಶ ಜಾಧವ್
ಬೀದರ-ಭಗವಂತ ಖೂಬಾ
ವಿಜಯಪುರ -ರಮೇಶ ಜಿಗಜಿಣಗಿ
ಶಿವಮೊಗ್ಗ -ಬಿ.ವೈ.ರಾಘವೇಂದ್ರ
.
ನಿಮ್ಮ ಕಾಮೆಂಟ್ ಬರೆಯಿರಿ