ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ

ನವದೆಹಲಿ: ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರಾದ ಅರ್ಜುನ್ ಸಿಂಗ್ ಮತ್ತು ದಿಬ್ಯೇಂದು ಅಧಿಕಾರಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸಂದೇಶಖಾಲಿ ಘಟನೆಯಿಂದ ತಾವು ಅಸಮಾಧಾನಗೊಂಡಿರುವುದಾಗಿ ಹೇಳಿದ್ದಾರೆ.
ಅರ್ಜುನ್‌ ಸಿಂಗ್ ಲೋಕಸಭೆಯಲ್ಲಿ ಪಶ್ಚಿಮ ಬಂಗಾಳದ ಬರಾಕಪುರ ಮತ್ತು ದಿಬ್ಯೇಂದು ಅಧಿಕಾರಿ ತಮ್ಲುಕ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ ಗೌತಮ ಮತ್ತು ಪಶ್ಚಿಮ ಬಂಗಾಳದ ಸಹ ಉಸ್ತುವಾರಿ ಅಮಿತ ಮಾಳವಿಯಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಈ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದ ನಂತರ 2019 ರಲ್ಲಿ ಬಿಜೆಪಿಗೆ ಸೇರಿದ ಅರ್ಜುನ್ ಸಿಂಗ್ ಮತ್ತು ಬ್ಯಾರಕ್‌ಪುರ ಕ್ಷೇತ್ರದಲ್ಲಿ ಆಗಿನ ಟಿಎಂಸಿ ಅಭ್ಯರ್ಥಿಯನ್ನು ಸೋಲಿಸಿ‌ ಆಯ್ಕೆಯಾಗಿದ್ದರು. 2022 ರಲ್ಲಿ ಅವರು ಸಂಸತ್ತಿನ ದಾಖಲೆಯಲ್ಲಿ ಬಿಜೆಪಿ ಸಂಸದರಾಗಿ ಉಳಿದುಕೊಂಡಿದ್ದರೂ ಸಹ ಮತ್ತೆ ಟಿಎಂಸಿಗೆ ಸೇರ್ಪಡೆಗೊಂಡಿದ್ದರು.
ಲೋಕಸಭೆ ಚುನಾವಣೆಗೆ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದ ಅಭ್ಯರ್ಥಿಗಳ ಪಟ್ಟಿಯಿಂದ ಅವರ ಹೆಸರನ್ನು ಕೈಬಿಟ್ಟ ನಂತರ ಅವರು ಟಿಎಂಸಿ ತೊರೆಯುವುದಾಗಿ ಘೋಷಿಸಿದ್ದರು. 2019 ರ ಸಂಸತ್ತಿನ ಚುನಾವಣೆಯ ನಂತರ ರಾಜ್ಯದಲ್ಲಿ ನಡೆದ ಹಿಂಸಾಚಾರವನ್ನು ಉಲ್ಲೇಖಿಸಿ.ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ ನಡೆದ ರೀತಿಯಲ್ಲಿ ನಮ್ಮ ಪ್ರದೇಶವು ಅತ್ಯಂತ ಕೆಟ್ಟದಾಗಿ ಹಾನಿಗೊಳಗಾಗಿದೆ ಎಂದು ಸಿಂಗ್ ಹೇಳಿದರು,

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

“ಪೊಲೀಸ್ ಮತ್ತು ಗೂಂಡಾಗಳನ್ನು ಬಳಸಿಕೊಂಡು ಟಿಎಂಸಿ (ಪಶ್ಚಿಮ ಬಂಗಾಳದಲ್ಲಿ) ಅಧಿಕಾರದಲ್ಲಿ ಉಳಿಸಿಕೊಳ್ಳಲು ಬಯಸಿದೆ, ಮತ್ತು ಸಂದೇಶಖಾಲಿ ಇತ್ತೀಚಿನ ಉದಾಹರಣೆಯಾಗಿದೆ. ಇಡೀ ಗಡಿ ಪ್ರದೇಶದಲ್ಲಿ (ಬಾಂಗ್ಲಾದೇಶದೊಂದಿಗೆ), ಸಂದೇಶಖಾಲಿಯಂತೆಯೇ ಜನರು ವಾಸಿಸುತ್ತಿದ್ದಾರೆ” ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರದೇಶವು ಸುಂದರ್‌ಬನ್ಸ್‌ನ ಅಂಚಿನಲ್ಲಿದೆ, ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಆತನ ಸಹಚರರ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆಯ ಆರೋಪದಿಂದಾಗಿ ಒಂದು ತಿಂಗಳಿನಿಂದ ಆ ಪ್ರದೇಶ ಪ್ರಕ್ಷುಬ್ಧವಾಗಿದೆ. “ನಾನು ಬಿಜೆಪಿ ಕುಟುಂಬಕ್ಕೆ ಧನ್ಯವಾದ ಹೇಳುತ್ತೇನೆ. ನಾನು ಸ್ವಲ್ಪ ಸಮಯದವರೆಗೆ ಬಿಜೆಪಿಯಿಂದ ದೂರವಿದ್ದರೂ, ಸಂದೇಶಖಾಲಿ ಘಟನೆಯ ನಂತರ, ನಾನು ಚಿಂತಿನನಾಗಿದ್ದೇನೆ ಮತ್ತು ನಾನು ಶಾಂತವಾಗಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಮತ್ತು ಮತ್ತೆ ಬಿಜೆಪಿಗೆ ಸೇರಲು ಬಯಸುತ್ತೇನೆ” ಎಂದು ಸಿಂಗ್ ಹೇಳಿದರು.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಸಹೋದರ ದಿಬ್ಯೇಂದು ಅಧಿಕಾರಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಪಕ್ಷದ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಬಿಜೆಪಿ ಕಾರ್ಯಕರ್ತರಾಗಿ ತಳಮಟ್ಟದಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement