ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನಿವಾಸಕ್ಕೆ ಹೋದ ಇ.ಡಿ. ಅಧಿಕಾರಿಗಳು ಅವರನ್ನು ರಾತ್ರಿ 9ರ ಸುಮಾರಿಗೆ ಬಂಧಿಸಿದ್ದಾರೆ.
ಇ.ಡಿ. ಅಧಿಕಾರಿಗಳು ದೊಡ್ಡ ಮಟ್ಟದ ಪೊಲೀಸ್​ ಭದ್ರತೆಯೊಂದಿಗೆ ಅವರ ನಿವಾಸಕ್ಕೆ ತೆರಳಿ ಸತತವಾಗಿ ಎರಡು ಗಂಟೆಗಳ ಕಾಲ ಪರಿಶೋಧ ನಡೆಸಿದರು. ಇದೇ ವೇಳೆ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಕೇಜ್ರಿವಾಲ್ ಅವರ ಮನೆಗೆ ಅಧಿಕಾರಿಗಳು ತೆರಳುತ್ತಿದ್ದಂತೆ ಆಪ್​ ಕಾರ್ಯಕರ್ತರು ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ನಾಯಕರು ಮನೆಯ ಸುತ್ತ ಜಮಾಯಿಸಿ ಘೋಷಣೆಗಳನ್ನು ಕೂಗಿದರು.
ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳ ಬಂಧನದಿಂದ ರಕ್ಷಣೆ ಕೋರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ಬಲವಂತದಿಂದ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತ್ತು.
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement