ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಪಿಲಿಭಿತ್‌ನಿಂದ ಸ್ಪರ್ಧಿಸಲು ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿದ ಕೆಲವೇ ದಿನಗಳಲ್ಲಿ ಪಿಲಿಭಿತ್‌ ಹಾಲಿ ಸಂಸದ ವರುಣ ಗಾಂಧಿ ಅವರು ತಮ್ಮ ಕ್ಷೇತ್ರದ ಜನರಿಗೆ ಭಾವನಾತ್ಮಕ ಬರೆದಿದ್ದಾರೆ. “ನನ್ನ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದರೂ … ನನ್ನ ಸಂಬಂಧ (ನಿಮ್ಮೊಂದಿಗೆ) ನನ್ನ ಕೊನೆಯ ಉಸಿರು ಇರುವವರೆಗೂ ಕೊನೆಗೊಳ್ಳುವುದಿಲ್ಲ. ನಾನು ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಪತ್ರದಲ್ಲಿ ಅವರು ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದ್ದಾರೆ. ಅವರು ಈ ಪ್ರದೇಶಕ್ಕೆ ಮೊದಲ ಬಾರಿಗೆ ಕಾಲಿಟ್ಟದ್ದನ್ನು ನೆನಪಿಸಿಕೊಂಡಿದ್ದಾರೆ. ಪಿಲಿಭಿತ್ ಜೊತೆಗೆ ಬಾಂಧವ್ಯವು ತಮ್ಮ ಬಾಲ್ಯದ ಆರಂಭಿಕ ವರ್ಷಗಳಷ್ಟು ಹಿಂದಿನದು ಎಂದು ಅವರು ಹೇಳಿದ್ದಾರೆ.
ಇದು ತಮ್ಮ ಜೀವನದ ಮಹತ್ವದ ಭಾಗವಾಗಿದೆ ಎಂದು ಹೇಳಿದ್ದಾರೆ.“ಇಂದು ನಾನು ಈ ಪತ್ರವನ್ನು ಬರೆಯುತ್ತಿರುವಾಗ, ಲೆಕ್ಕವಿಲ್ಲದಷ್ಟು ನೆನಪುಗಳು ನನ್ನನ್ನು ಭಾವುಕರನ್ನಾಗಿಸಿದೆ. ಎಂದು ನನಗೆ ನೆನಪಿದೆ 1983 ರಲ್ಲಿ ತನ್ನ ತಾಯಿಯ ಬೆರಳು ಹಿಡಿದುಕೊಂಡು ಮೊದಲ ಬಾರಿಗೆ ಪಿಲಿಭಿತ್‌ಗೆ ಬಂದಾಗ ನಾನು 3 ವರ್ಷದ ಪುಟ್ಟ ಹುಡುಗ, ಮುಂದೊಂದು ದಿನ ಈ ಸ್ಥಳವು ತನ್ನ ಕೆಲಸದ ಸ್ಥಳವಾಗುತ್ತದೆ ಮತ್ತು ಇಲ್ಲಿನ ಜನರು ತನ್ನ ಕುಟುಂಬವಾಗುತ್ತಾರೆ ಎಂದು ತನಗೆ ಹೇಗೆ ತಿಳಿದಿರಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

ತನ್ನ ಪತ್ರದಲ್ಲಿ, ಪಿಲಿಭಿತ್‌ನ ಹಲವಾರು ಅಂಶಗಳು ತಮ್ಮ ಮೇಲೆ ಆಳವಾದ ಪ್ರಭಾವ ಬೀರಿದೆ ಎಂಬುದನ್ನು ವರುಣ ಗಾಂಧಿ ಒಪ್ಪಿಕೊಂಡಿದ್ದಾರೆ. ಅವರು ಈ ಪ್ರದೇಶದ ಜನರಿಂದ ತಾನು ಪಡೆದ ಆದರ್ಶಗಳು, ಸರಳತೆ ಮತ್ತು ದಯೆಯ ಅಮೂಲ್ಯ ಪಾಠಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಅಂಶಗಳು ಸಂಸತ್ತಿನ ಸದಸ್ಯರಾಗಿ ತನ್ನ ಪಾತ್ರದ ಮೇಲೆ ಪ್ರಭಾವ ಬೀರಿತು, ಅಲ್ಲದೆ, ತನ್ನ ವೈಯಕ್ತಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು. ಸಂಸದನಾಗಿ ನನ್ನ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದರೂ ಪಿಲಿಭಿತ್ ಜೊತೆಗಿನ ನನ್ನ ಸಂಬಂಧ ನನ್ನ ಕೊನೆಯ ಉಸಿರಿನವರೆಗೂ ಕೊನೆಗೊಳ್ಳುವುದಿಲ್ಲ ಎಂದು ಅವರು ಬರೆದಿದ್ದಾರೆ.

“ಪಿಲಿಭಿತ್‌ನ ಮಹಾನ್ ಜನರಿಗೆ ವರ್ಷಗಳ ಕಾಲ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ನಾನು ಪರಿಗಣಿಸುತ್ತೇನೆ. ಪಿಲಿಭಿತ್‌ನಿಂದ ನಾನು ಪಡೆದ ಆದರ್ಶಗಳು, ಸರಳತೆ ಮತ್ತು ದಯೆಯು ಸಂಸದನಾಗಿ ಮಾತ್ರವಲ್ಲದೆ ವ್ಯಕ್ತಿಯಾಗಿಯೂ ನನ್ನ ಬೆಳವಣಿಗೆಯಲ್ಲಿ ದೊಡ್ಡ ಕೊಡುಗೆಯನ್ನು ಹೊಂದಿದೆ. ನಿಮ್ಮ ಪ್ರತಿನಿಧಿಯಾಗಿರುವುದು ನನ್ನ ಜೀವನದ ಶ್ರೇಷ್ಠ ಗೌರವವಾಗಿದೆ ಮತ್ತು ನಾನು ಯಾವಾಗಲೂ ನಿಮ್ಮ ಹಿತಾಸಕ್ತಿಗಳನ್ನು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸಮರ್ಥಿಸಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಸಂಸದನಾಗಿ ಅಲ್ಲದಿದ್ದರೆ ಮಗನಾಗಿ ನನ್ನ ಜೀವನದುದ್ದಕ್ಕೂ ನಿಮ್ಮ ಸೇವೆ ಮಾಡಲು ನಾನು ಬದ್ಧನಾಗಿದ್ದೇನೆ ಮತ್ತು ನನ್ನ ಬಾಗಿಲು ನಿಮಗಾಗಿ ಯಾವಾಗಲೂ ತೆರೆದಿರುತ್ತದೆ. ನಾನು ಸಾಮಾನ್ಯ ಜನರ ಧ್ವನಿ ಎತ್ತಲು ರಾಜಕೀಯಕ್ಕೆ ಬಂದಿದ್ದೇನೆ ಮತ್ತು ಈ ಕೆಲಸವನ್ನು ನಾನು ಯಾವಾಗಲೂ ಮಾಡುವುದನ್ನು ಮುಂದುವರಿಸಲು ನಿಮ್ಮ ಆಶೀರ್ವಾದವನ್ನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮಾರ್ಚ್ 25 ರಂದು ಬಿಡುಗಡೆಯಾದ ಪಕ್ಷದ ಅಭ್ಯರ್ಥಿಗಳ ಐದನೇ ಪಟ್ಟಿಯಲ್ಲಿ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಪಟ್ಟಿಯಿಂದ ವರುಣ್ ಅವರನ್ನು ಕೈಬಿಡಲಾಯಿತು ಮತ್ತು ಮಾಜಿ ಕಾಂಗ್ರೆಸ್ ನಾಯಕ ಹಾಗೂ ಉತ್ತರ ಪ್ರದೇಶದ ಸಚಿವ ಜಿತಿನ್ ಪ್ರಸಾದ ಅವರನ್ನು ಕಣಕ್ಕಿಳಿಸಲಾಗಿದೆ ಎಂಬುದು ಗಮನಿಸಬೇಕಾದ ಅಂಶವಾಗಿದೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement