ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು.
ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ ಅಥವಾ ಮೈಸೂರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಈ ಕ್ಷೇತ್ರಗಳಲ್ಲಿ ಬೇರೆಯವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು, ಶನಿವಾರ (ಮಾರ್ಚ್‌ 30) ದೆಹಲಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ಸಿಗೆ 23 ಕ್ಷೇತ್ರ ಗೆಲ್ಲುವ ಅವಕಾಶ ಇದೆ. ನಾನು 9 ವರ್ಷ ಕಾಂಗ್ರೆಸ್‌ನಲ್ಲಿ ಇದ್ದೆ.
ಪತ್ರಕರ್ತೆಯಾಗಿದ್ದ ನನಗೆ ಕಾಂಗ್ರೆಸ್ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವಿರುದ್ಧ ಸ್ಪರ್ಧೆಗೆ ಅವಕಾಶ ಕೊಟ್ಟಿತ್ತು. ನಾನು ಲೋಕಸಭೆ ಚುನಾವಣೆಗೆ ನಿಂತಾಗ ಅಭ್ಯರ್ಥಿಯ ಭದ್ರತಾ ಠೇವಣಿ ಹಣವನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ನೀಡಿದ್ದರು ಎಂದು ಅವರು ನೆನಪಿಸಿಕೊಂಡರು. ಕಾಂಗ್ರೆಸ್ ಜನರ ಪರವಾಗಿ ಯಾವತ್ತೂ ನಿಂತಿದೆ ಎಂದರು.

ಪ್ರಮುಖ ಸುದ್ದಿ :-   6 ವರ್ಷ ನರೇಂದ್ರ ಮೋದಿ ಅನರ್ಹತೆ : ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಜೈರಾಮ ರಮೇಶ ಮಾತನಾಡಿ, 2004 ಹಾಗೂ 2009 ರಲ್ಲಿ ಕಾಂಗ್ರೆಸ್ ಸಂಸದರಾಗಿದ್ದರು. ಹಲವು ವಿಚಾರಗಳ ಬಗ್ಗೆ ಅವರು ಧ್ವನಿ ಎತ್ತಿದ್ದರು. ಈಗ ಅವರು ಪಕ್ಷಕ್ಕೆ ಮರಳಿ ಬರುತ್ತಿರುವುದು ಖುಷಿ ತಂದಿದೆ. ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬಲಿಷ್ಠಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಣೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement