ಅಡ್ವಾಣಿ ನಿವಾಸದಲ್ಲೇ ಅವರಿಗೆ ʼಭಾರತ ರತ್ನʼ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಅವರು ಪ್ರದಾನ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದವರು ಉಪಸ್ಥಿತರಿದ್ದರು.

ಶನಿವಾರ ರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಚೌಧರಿ ಚರಣ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಶನಿವಾರ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಅವರು ಆಗಮಿಸಿರಲಿಲ್ಲ. ಹೀಗಾಗಿ ಅವರಿಗೆ ಅವರ ಮನೆಯಲ್ಲೇ ಭಾರತ ರತ್ನವನ್ನು ಪ್ರದಾನ ಮಾಡಲಾಯಿತು.

ಈಗಿನ ಪಾಕಿಸ್ತಾನದ ಕರಾಚಿಯಲ್ಲಿ, ನವೆಂಬರ್ 8, 1927 ರಂದು ಜನಿಸಿದ ಅಡ್ವಾಣಿ ಅವರು, 1980 ರಲ್ಲಿ ಭಾರತೀಯ ಜನತಾ ಪಕ್ಷವು ಅಸ್ತಿತ್ವಕ್ಕೆ ಬಂದಾಗಿನಿಂದ ಬಿಜೆಪಿ ಅಧ್ಯಕ್ಷರಾಗಿ ಸುದೀರ್ಘ ಅವಧಿಯವರೆಗೆ ಸೇವೆ ಸಲ್ಲಿಸಿದ್ದಾರೆ.
ಸುಮಾರು ಮೂರು ದಶಕಗಳ ಸಂಸದೀಯ ವೃತ್ತಿಜೀವನವನ್ನು ಪೂರ್ಣಗೊಳಿಸಿದ ಅವರು, ಅಟಲ್ ಬಿಹಾರಿ ವಾಜಪೇಯಿ (1999-2004) ಸಂಪುಟದಲ್ಲಿ ಮೊದಲು ಗೃಹ ಸಚಿವರಾಗಿದ್ದರು ಮತ್ತು ನಂತರ ಉಪಪ್ರಧಾನಿಯಾಗಿದ್ದರು. ಅಡ್ವಾಣಿ ಅವರು ಮಹಾನ್ ಬೌದ್ಧಿಕ ಸಾಮರ್ಥ್ಯ, ಪ್ರಬಲ ತತ್ವ ಸಿದ್ಧಾಂತದ ಪ್ರತಿಪಾದಕ ಮತ್ತು ಬಲಲಿಷ್ಠ ಹಾಗೂ ಸಮೃದ್ಧ ಭಾರತದ ಕಲ್ಪನೆಗೆ ಅಚಲವಾದ ಬೆಂಬಲವನ್ನು ಹೊಂದಿರುವ ವ್ಯಕ್ತಿ ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ದೃಢೀಕರಿಸಿದಂತೆ, ಅಡ್ವಾಣಿ ಅವರು ‘ರಾಷ್ಟ್ರೀಯತೆಯ ಮೇಲಿನ ತಮ್ಮ ಮೂಲ ನಂಬಿಕೆಯ ಮೇಲೆ ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಮತ್ತು ಪರಿಸ್ಥಿತಿಯಿಂದ ಬೇಡಿಕೆ ಬಂದಾಗಲೆಲ್ಲಾ ರಾಜಕೀಯ ಪ್ರತಿಕ್ರಿಯೆಗಳಲ್ಲಿ ನಮ್ಯತೆಯನ್ನು ಪ್ರದರ್ಶಿಸಿದ್ದಾರೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement