ಆದಾಯ ತೆರಿಗೆ ಪ್ರಕರಣ: ಚುನಾವಣೆ ಮುಗಿಯುವವರೆಗೂ ಕಾಂಗ್ರೆಸ್ ವಿರುದ್ಧ ಕ್ರಮ ಇಲ್ಲ ಎಂದು ಸುಪ್ರೀಂ ಕೋರ್ಟಿಗೆ ಕೇಂದ್ರದ ಸ್ಪಷ್ಟನೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷದಿಂದ ಸುಮಾರು 3,500 ಕೋಟಿ ರೂ.ಗಳ ಆದಾಯ ತೆರಿಗೆ ಬಾಕಿ ವಸೂಲಿ ಕುರಿತಂತೆ ಮುಂಬರುವ ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.
ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠದ ಎದುರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಭರವಸೆ ನೀಡಿದ್ದಾರೆ. ಈಗಿನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಇಲಾಖೆಯು ಪ್ರಕರಣವನ್ನು ಚುರುಕುಗೊಳಿಸಲು ಹೋಗುತ್ತಿಲ್ಲ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ಜೊತೆಗೆ ಅಂದಾಜು 3,500 ಕೋಟಿ ರೂಪಾಯಿ ತೆರಿಗೆ ಬೇಡಿಕೆಗೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುತ್ತಿಲ್ಲ‌ ಎಂದು ಅದು ಹೇಳುತ್ತಿದೆ ಎಂದು ಹೇಳಿದ ನ್ಯಾಯಾಲಯ ಜುಲೈ ಎರಡನೇ ವಾರದಲ್ಲಿ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ತಿಳಿಸಿತು.
ಆದಾಯ ತೆರಿಗೆ ಬೇಡಿಕೆಗಳ ವಿರುದ್ಧ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಇದು 2016 ರ ತೀರ್ಪಿನೊಂದಿಗೆ ನಂಟು ಹೊಂದಿದೆ ಎಂದು ಎಸ್‌ ಜಿ ತುಷಾರ್ ಮೆಹ್ತಾ ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ಕಾಂಗ್ರೆಸ್ ಪಕ್ಷವು ಈ ವರ್ಷ ಸುಮಾರು 134 ಕೋಟಿ ರೂ.ಗಳ ಆದಾಯ ತೆರಿಗೆ ಬಾಕಿ ಪಾವತಿಸಿದ್ದರೆ, ಈ ಹಿಂದೆ ನಿಗದಿಪಡಿಸಿದ ಮಾನದಂಡಗಳ ಆಧಾರದ ಮೇಲೆ ಈಗ ಅದು 1,700 ಕೋಟಿ ರೂ. ಪಾವತಿಸಬೇಕಾಗುತ್ತದೆ ಎಂದು ಮೆಹ್ತಾ ಹೇಳಿದರು. ಹಾಗೂ ಮುಂದಿನ ಲೋಕಸಭಾ ಚುನಾವಣೆ ಮುಗಿಯುವವರೆಗೆ ಬಾಕಿ ವಸೂಲಾತಿ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.ಕೇಂದ್ರ ಸರ್ಕಾರ ನೀಡಿದ ವಿನಾಯಿತಿ ಬಗ್ಗೆ ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅಭಿಷೇಕ ಮನು ಸಿಂಘ್ವಿ ಅವರಿಗೆ “ನೀವು (ಕಾಂಗ್ರೆಸ್) ಯಾವಾಗಲೂ ಯಾರ ಬಗ್ಗೆಯೂ ನಕಾರಾತ್ಮಕ ಗ್ರಹಿಕೆ ಹೊಂದಬಾರದು ಎಂದು ನ್ಯಾಯಮೂರ್ತಿ ನಾಗರತ್ನ ಮೌಖಿಕವಾಗಿ ಅಭಿಪ್ರಾಯಪಟ್ಟರು.
ಮಾರ್ಚ್ 27, 28, 29 ರಂದು ವಿಭಾಗೀಯ ಮೌಲ್ಯಮಾಪನವಿತ್ತು ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್‌ನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ₹ 135 ಕೋಟಿ ಸಂಗ್ರಹಿಸಿದ್ದಾರೆ, ಕಾಂಗ್ರೆಸ್‌ ಲಾಭ ಗಳಿಸುವ ಸಂಸ್ಥೆಯಲ್ಲ ಬದಲಿಗೆ ಕೇವಲ ರಾಜಕೀಯ ಪಕ್ಷ ಎಂದು ಸಿಂಘ್ವಿ ಹೇಳಿದರು.

ಈ ಹಂತದಲ್ಲಿ ಮೆಹ್ತಾ ಚುನಾವಣೆ ಮುಗಿಯುವವರೆಗೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದರು. ಅವರ ವಾದ ದಾಖಲಿಸಿಕೊಂಡ ನ್ಯಾಯಾಲಯ ಪ್ರಕರಣವನ್ನು ಜುಲೈಗೆ ಮುಂದೂಡಿತು.
2014-15, 2015-16 ಮತ್ತು 2016-17 ಮತ್ತು 2017-18, 2018-19, 2019-20 ಮತ್ತು 2020-21ರ ತೆರಿಗೆ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಮೌಲ್ಯಮಾಪನ ಪ್ರಕ್ರಿಯೆ ಪುನರಾರಂಭಿಸುವ ಆದಾಯ ತೆರಿಗೆ ಇಲಾಖೆ ನಿರ್ಧಾರದ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಇದಕ್ಕೂ ಮೊದಲು, ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಸಂಬಂಧಿತ ವಿಷಯಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಪರಿಹಾರ ನೀಡಲು ನಿರಾಕರಿಸಿತ್ತು.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement