ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ ನಾಮಪತ್ರ ಸಲ್ಲಿಕೆ ; ಆಸ್ತಿ ವಿವರ ಘೋಷಣೆ : ಪತ್ನಿಯೇ ಶ್ರೀಮಂತೆ…

ಬೆಂಗಳೂರು: ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ಅವರು ರಾಮನಗರದಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಪತಿಯೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು,. ಅವರ ಜೊತೆ ಪತ್ನಿ ಎಚ್.ಡಿ. ಅನುಸೂಯ ಹಾಗೂ ಬೆಂಬಲಿಗರು ಇದ್ದರು. ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಅನುಸೂಯ ಅವರು, ವೈದ್ಯಕೀಯ … Continued

“ಅಮೇಥಿ ನನ್ನನ್ನು ಬಯಸಿದರೆ…”: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಗಾಂಧಿ ಕುಟುಂಬದ ಅಳಿಯ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ತಮ್ಮ ರಾಜಕೀಯ ಪಾದಾರ್ಪಣೆಯ ಸುಳಿವು ನೀಡಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಗುರುವಾರ “ನಾನು ಸಂಸದನಾಗಲು ಬಯಸಿದರೆ ನಾನು ಅವರನ್ನು ಪ್ರತಿನಿಧಿಸಬೇಕೆಂದು ಅಮೇಥಿಯ ಜನರು ನಿರೀಕ್ಷಿಸುತ್ತಾರೆ ಎಂದು ಹೇಳಿದ್ದಾರೆ. ರಾಯಬರೇಲಿ, … Continued

ಸುಮಲತಾ ಅಂಬರೀಶ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, … Continued

ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continued

ನಟಿ-ಸಂಸದೆ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸುರ್ಜೆವಾಲಾ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ : ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ ವಿರುದ್ಧ ಕಾಂಗ್ರೆಸ್ ಸಂಸದ ರಣದೀಪ ಸಿಂಗ್ ಸುರ್ಜೆವಾಲ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ … Continued

ಒಂದು ವರ್ಷದ ಹಿಂದೆ 17,545 ಕೋಟಿ ರೂ.ಗಳಿಷ್ಟಿದ್ದ ಬೈಜು ರವೀಂದ್ರನ್ ಆಸ್ತಿ ಈಗ ಶೂನ್ಯಕ್ಕೆ…!

ಇತ್ತೀಚೆಗೆ ಬಿಡುಗಡೆಯಾದ ಫೋರ್ಬ್ಸ್ ವರ್ಲ್ಡ್‌ನ ಬಿಲಿಯನೇರ್‌ಗಳ ಪಟ್ಟಿ 2024 ರ ಪ್ರಕಾರ ಒಂದು ವರ್ಷದ ಹಿಂದೆ ಬೈಜು ಸಂಸ್ಥಾಪಕ ಮತ್ತು ಸಿಇಒ ಬೈಜು ರವೀಂದ್ರನ್ ₹ 17,545 ಕೋಟಿ ಇದ್ದ ನಿವ್ವಳ  ಆಸ್ತಿ   ಮೌಲ್ಯವು ಈಗ ಶೂನ್ಯಕ್ಕೆ ಕುಸಿದಿದೆ. ಒಂದು ಕಾಲದಲ್ಲಿ ಅತ್ಯಮೂಲ್ಯವಾದ ಸ್ಟಾರ್ಟ್‌ಅಪ್‌ಗಳಲ್ಲಿ ಒಂದಾಗಿದ್ದ ಬೈಜೂಸ್ ಇತ್ತೀಚಿನ ದಿನಗಳಲ್ಲಿ ಹಲವಾರು ಹಿನ್ನಡೆಗಳನ್ನು ಎದುರಿಸುತ್ತಿದೆ, ಇದರಲ್ಲಿ … Continued

ಮಯಾಂಕ ಯಾದವ್ 2 ವರ್ಷಗಳಿಂದ ಸಸ್ಯಾಹಾರಿಯಾಗಿದ್ದಾನೆ : ಐಪಿಎಲ್ 2024ರಲ್ಲಿ ಗಮನಸೆಳೆದ ಯುವ ವೇಗಿ ತಾಯಿಯ ಹೇಳಿಕೆ

ನವದೆಹಲಿ : ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವೇಗಿ ಮಯಾಂಕ ಯಾದವ್ ತನ್ನ ವೇಗದ ಬೌಲಿಂಗ್‌ನಿಂದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ನಲ್ಲಿ ಗಮನ ಸೆಳೆದಿದ್ದಾರೆ. ಅವರ ಗಂಟೆಗೆ 150 ಕಿಮೀಗಿಂತಲೂ ಹೆಚ್ಚಿನ ವೇಗದ ಎಸೆತಗಳು ಎದುರಾಳಿ ಬ್ಯಾಟರ್‌ ಅನ್ನು ಕಂಗೆಡಿಸುತ್ತಿವೆ. ಅವರ ವೇಗದ ಬೌಲಿಂಗ್‌ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ T20 ಐಪಿಎಲ್ … Continued

ದೆಹಲಿಗೆ ಹೋದರೂ ಈಶ್ವರಪ್ಪ ಭೇಟಿಯಾಗದ ಅಮಿತ್‌ ಶಾ….!

ಬೆಂಗಳೂರು: ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಆಹ್ವಾನದ ಮೇರೆಗೆ ಬುಧವಾರ ದೆಹಲಿಗೆ ತೆರಳಿದರೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್‌ ಬಂದಿದ್ದಾರೆ. ಮಂಗಳವಾರ ದೂರವಾಣಿ ಕರೆ ಮಾಡಿದ್ದ ಅಮಿತ್‌ ಶಾ ಅವರು ತಮಗೆ ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದರು ಎಂಬುದಾಗಿ ಈಶ್ವರಪ್ಪ ಹೇಳಿದ್ದರು. … Continued

ಇಂಡಿ : ಯಶಸ್ವಿ ಕಾರ್ಯಾಚರಣೆ ; ಜೀವಂತವಾಗಿ ಹೊರಬಂದ ಬೋರ್‌ ವೆಲ್‌ ನಲ್ಲಿ ಬಿದ್ದಿದ್ದ 2 ವರ್ಷದ ಬಾಲಕ

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಜೀವಂತವಾಗಿ ಹೊರ ತೆಗೆಯಲಾಗಿದೆ. ಸುಮಾರು 16 ಗಂಟೆಗಳ ಕಾರ್ಯಾಚರಣೆ ಬಳಿಕ ಎರಡು ವರ್ಷದ ಸಾತ್ವಿಕ ಮುಜಗೊಂಡ ಎಂಬ ಮಗುವನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು … Continued

50 ವರ್ಷಗಳ ಹಿಂದೆ ಸತತವಾಗಿ 120 ಗಂಟೆಗಳ ಕಾಲ ಹಸಿವಿನಿಂದ ಬಳಲಿದ ಘಟನೆ ನೆನಪಿಸಿಕೊಂಡ ಇನ್ಫೋಸಿಸ್ ನಾರಾಯಣಮೂರ್ತಿ

ವಿಶ್ವಸಂಸ್ಥೆ: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 50 ವರ್ಷಗಳ ಹಿಂದೆ ನಿರಂತರ 120 ಗಂಟೆ ಕಾಲ ಹಸಿವಿನಿಂದ ಬಳಲಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಗೆ ಭಾರತದ ಪರ್ಮನೆಂಟ್ ಮಿಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುರೋಪ್‌ನಲ್ಲಿ ಹಿಚ್‌ಹೈಕಿಂಗ್ ಮಾಡುವಾಗ 120 ಗಂಟೆಗಳ ಕಾಲ “ಹಸಿವನ್ನು ಅನುಭವಿಸಿದ್ದೆ” ಎಂದು ನಾರಾಯಣ ಮೂರ್ತಿ … Continued