ವೀಡಿಯೊ..| ಟೋಲ್ ಪ್ಲಾಜಾ ಮೇಲೆ ಮುಸುಕುಧಾರಿಗಳಿಂದ ಗುಂಡಿನ ದಾಳಿ, ಸಿಬ್ಬಂದಿಗೆ ಥಳಿತ ; ಓಡಿಹೋದ ಇಬ್ಬರು ಸಿಬ್ಬಂದಿ ಬಾವಿಯಲ್ಲಿ ಬಿದ್ದು ಸಾವು

ಭೋಪಾಲ್: ಆಘಾತಕಾರಿ ಘಟನೆಯಲ್ಲಿ ಸುಮಾರು 10-12 ಜನ ಮುಸುಕುಧಾರಿ ಗೂಂಡಾಗಳು ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶದ ದಾಟಿಯಾದಲ್ಲಿನ ಟೋಲ್ ಪ್ಲಾಜಾ ಮೇಲೆ ದಾಳಿ ನಡೆಸಿ ಟೋಲ್ ನೌಕರರಿಗೆ ಅಮಾನುಷವಾಗಿ ಥಳಿಸಿದ್ದಾರೆ. ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. ಮುಸುಕುಧಾರಿ ಬಂದೂಕುಧಾರಿಗಳ ದಾಳಿಯ ವೇಳೆ ತಮ್ಮನ್ನು ರಕ್ಷಿಸಿಕೊಳ್ಳಲು ಟೋಲ್ ಪ್ಲಾಜಾದ ಇಬ್ಬರು ಉದ್ಯೋಗಿಗಳು ಓಡುತ್ತಿದ್ದಾಗ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇದನ್ನು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ ವಲ್ಲಭ ಅವರು, ಪಕ್ಷವು ‘ದಿಕ್ಕಿಲ್ಲದೆ’ ಸಾಗುತ್ತಿದೆ ಎಂದು ಕರೆದಿದ್ದಾರೆ ಮತ್ತು ತಮ್ಮ ನಿರ್ಗಮನಕ್ಕೆ ಜಾತಿ ಗಣತಿಯಂತಹ … Continued

98.52 ಕೋಟಿ ರೂ. ಮೊತ್ತದ ಬಿಯರ್-ಕಚ್ಚಾ ವಸ್ತು ಜಪ್ತಿ

ಮೈಸೂರು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ (Excise) ಜಂಟಿ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿದ್ದು, ಒಟ್ಟು 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದೆ. ಘಟಕದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ದೂರವಾಣಿ ಕರೆಯ ಮೇರೆಗೆ ಜಿಲ್ಲಾ … Continued

ಬೆಳಗಾವಿ: ನಡು ರಸ್ತೆಯಲ್ಲೇ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಳಗಾವಿ : ಕಾಂಗ್ರೆಸ್‌ ಮುಖಂಡರೊಬ್ಬರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳ (58) ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಣ್ಣಪ್ಪ ಅವರು ಖೀಳೆಗಾಂವ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಹಾಗೂ ಶಾಸಕ ಲಕ್ಷ್ಮಣ ಸವದಿ ಆಪ್ತರಾಗಿದ್ದರು. … Continued