ಕಲಬುರಗಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ ಎಂದು ವರದಿಯಾಗಿದೆ.
ಕಲಬುರಗಿ ನಗರದ ಬಿದ್ದಾಪುರ ಕಾಲೊನಿಯ ನಿವಾಸಿ ವಿಜಯಕುಮಾರ (45) ಎಂಬವರು ಮೃತಪಟ್ಟವರು ಎಂದು ಗರುತಿಸಲಾಗಿದೆ.
ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅವರು ಮುಗಳಖೋಡ- ಬೀದರ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಕಮಲಾಪುರ ಬಳಿ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟರು ಎಂದು ಸುದ್ದಿಯಾಗಿದೆ.
ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮ ಕಾಮೆಂಟ್ ಬರೆಯಿರಿ