ಮನೆಗೆ ಹೋಗುತ್ತಿದ್ದವರ ಮೇಲೆ ಬಿದ್ದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ನಿಹಾಳ ಸಮೀಪದ ಕಟ್ಟಿಗ್ಯಾನಮಡ್ಡಿ ಸಮೀಪದಲ್ಲಿ ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಟಿಪ್ಪರ್ ಮಗುಚಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಬಾದರದಿನ್ನಿ ಗ್ರಾಮದ ವೆಂಕಪ್ಪ ಶಿವಪ್ಪ ತೋಳಮಟ್ಟಿ(70) ಯಲ್ಲವ್ವ ವೆಂಕಪ್ಪ ತೋಳಮಟ್ಟಿ(60) ಪುಂಡಲೀಕ ತೋಳಮಟ್ಟಿ(35), ಗಿರಿಸಾಗತ ನಿವಾಸಿ ಅಶೋಕ ಬೊಮ್ಮಣ್ಣವರ( 45) ಅಶೋಕ ಪತ್ನಿ ನಾಗವ್ವ (40) ಎಂದು ಗುರುತಿಸಲಾಗಿದೆ.
ಐವರೂ ಹೊಲದಲ್ಲಿ ಕೆಲಸ ಮುಗಿಸಿಕೊಂಡು ತಮ್ಮೂರು ಬಾದರದಿನ್ನಿಗೆ ಹೋಗಲು ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯ ಪಕ್ಕದಲ್ಲಿ ನಿಂತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಣ್ಣು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಟಿಪ್ಪರ್ ವಾಹನದ ಟೈರ್ ಸ್ಪೋಟಗೊಂಡಿದ್ದರಿಂದ ರಸ್ತೆ ಪಕ್ಕದಲ್ಲಿ ನಿಂತಿದ್ದ ಐವರ ಮೇಲೆ ಟಿಪ್ಪರ್‌ ಮಗುಚಿದೆ. ಆಗ ಐವರು ಸಹ ಮಣ್ಣಿನಡಿ ಸಿಲುಕಿದರು ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳಿಯರ ಸಹಾಯದಿಂದ ಮಣ್ಣಿನಡಿ ಸಿಲುಕಿದ್ದ ಶವ ಹೊರ ತಗೆದು, ಮರಣೋತ್ತರ ಪರೀಕ್ಷೆಗೆ ಬೀಳಗಿ ತಾಲೂಕು ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement