ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ಶುಕ್ರವಾರ ನಡೆದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ‘ಉತ್ತಮ ಪ್ರತಿಕ್ರಿಯೆ’ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮತದಾನದ ಪ್ರಮಾಣವು ಶುಕ್ರವಾರ ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ಜನರು ದಾಖಲೆಯ ಸಂಖ್ಯೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ವೈಯಕ್ತಿಕ ಕಾರಣಗಳಿಗೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದಕ್ಕೆ ಮೃತಳ ತಂದೆ ನಿರಂಜನ ಹಿರೇಮಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಗುರವಾದ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ. ಮುಖ್ಯಮಂತ್ರಿಯವರು ಅಷ್ಟು ಹಗುರವಾಗಿ ಹೇಗೆ … Continued

ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ಇಂಫಾಲ್ : 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ. ಬಿಷ್ಣುಪುರ ಜಿಲ್ಲೆಯ ಥಮನ್‌ಪೋಕ್ಪಿ ಮತದಾನ ಕೇಂದ್ರದಲ್ಲಿ ಕೇಂದ್ರದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಮತಗಟ್ಟೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದೆ. … Continued

ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : “ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ತಮಗಾದ ಕರಾಳ ಅನುಭವವೊಂದನ್ನು ಬಿಚ್ಚಿಟ್ಟಿದ್ದಾರೆ. ರೆಸ್ಟೋರೆಂಟ್‌ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ತಮ್ಮ ಪತಿ ಭುವನ್ ಮೇಲೆ ಹಲ್ಲೆ ಮಾಡಿದ್ದಾರೆ. “ನಾವು ಕನ್ನಡದಲ್ಲಿ ಮಾತನಾಡಿದ್ದೇ ಅವರಿಗೆ ತಪ್ಪಾಗಿ ಕಾಣಿಸಿದೆ” ಎಂದು ನಟಿ ಹರ್ಷಿಕಾ ಪೂಣಚ್ಚ ಆರೋಪಿಸಿದ್ದು, ಈ ಬಗ್ಗೆ ಸುದೀರ್ಘವಾಗಿ … Continued

ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

ನವದೆಹಲಿ: 2022 ರಲ್ಲಿ ಸಹಿ ಹಾಕಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿ ಫಿಲಿಪೈನ್ಸ್ ದೇಶವು ಭಾರತದಿಂದ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಮೊದಲ ಸೆಟ್ ಅನ್ನು ಸ್ವೀಕರಿಸಲು ಸಿದ್ಧವಾಗಿದೆ. ರಕ್ಷಣಾ ಮೂಲಗಳ ಪ್ರಕಾರ, ಫಿಲಿಪೈನ್ಸ್ ಮೆರೈನ್ ಕಾರ್ಪ್ಸ್‌ ಗೆ ಕ್ಷಿಪಣಿಗಳನ್ನು ತಲುಪಿಸಲು ಭಾರತೀಯ ವಾಯುಪಡೆಯು ತನ್ನ ಅಮೇರಿಕನ್ ನಿರ್ಮಿತ C-17 ಗ್ಲೋಬ್ಮಾಸ್ಟರ್ ಸಾರಿಗೆ ವಿಮಾನವನ್ನು … Continued

ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ನವದೆಹಲಿ: ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ಅವರನ್ನು ನೇಮಕ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ. ಪ್ರಸ್ತುತ ನೌಕಾಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ತ್ರಿಪಾಠಿ ಅವರು ವೈಸ್ ಅಡ್ಮಿರಲ್ ಆರ್ ಹರಿಕುಮಾರ ಅವರ ನಂತರ ಏಪ್ರಿಲ್ 30 ರಂದು ಅವರು ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವಹಿಸಿಕೊಳ್ಳಲಿದ್ದಾರೆ. ತ್ರಿಪಾಠಿ ಅವರು ಭಾರತೀಯ ನೌಕಾಪಡೆಯಲ್ಲಿ … Continued

ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಇಂದು(ಶುಕ್ರವಾರ) ನಡೆಯುತ್ತಿದೆ. ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 1,652 ಅಭ್ಯರ್ಥಿಗಳು ಕಣದಲ್ಲಿದ್ದು, 16.63 ಕೋಟಿ ಮತದಾಋರು ತಮ್ಮ ಮತದ ಹಕ್ಕನ್ನು ಚಲಾಯಿಸಲಿದ್ದಾರೆ. ತಮಿಳುನಾಡು – 39, ರಾಜಸ್ಥಾನದ … Continued

ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗ : ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಲಗಿದ್ದಾಗಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ನಗರಸಭೆ  ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ … Continued

ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ…!

ಈಶಾನ್ಯದ ಅರುಣಾಚಲ ಪ್ರದೇಶದ ದೂರದ ಹಳ್ಳಿ, 40-ಕಿಮೀ ಚಾರಣ ಮಾಡಿ ಅಲ್ಲಿಗೆ ಹೋಗಬೇಕು. ಆದರೆ ಈ ಮತದಾನ ಕೇಂದ್ರದಲ್ಲಿರುವುದು ಒಬ್ಬರೇ ಒಬ್ಬರು ಮತದಾರರು..! ಲೋಕಸಭೆ ಚುನಾವಣೆ ಮತದಾನಕ್ಕಾಗಿ ಏಕೈಕ ಮತದಾರರು ಇರುವ ಮಲೋಗಮ್ ಗ್ರಾಮದ ಮತದಾನ ಕೇಂದ್ರಕ್ಕೆ ಚುನಾವಣಾ ಆಯೋಗದ (EC) ಅಧಿಕಾರಿಗಳು ಗುರುವಾರ ಶ್ರಮದಾಯಕ ಸುದೀರ್ಘ ಪಾದಯಾತ್ರೆಯನ್ನು ಕೈಗೊಂಡರು. ಕೇಂದ್ರದ ಏಕೈಕ ಮತದಾರರಾದ 44 … Continued