ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮೈಸೂರಿನಲ್ಲಿ ‘ಬಘೀರ’ ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲು ಮತ್ತು ಕೈಗೆ ಪೆಟ್ಟಾಗಿದ್ದು, ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮೈಸೂರಿನಲ್ಲಿ ‘ಬಘೀರ’ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಿತ್ರೀಕರಣದ ವೇಳೆ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಎರಡು ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ಇದಾದ ಬಳಿಕ ಅವರು ಶೂಟಿಂಗ್‌ಗೆ ಮರಳಲಿದ್ದಾರೆ. ಚಿಕಿತ್ಸೆ ಬಳಿಕ ಅವರನ್ನು ಡಿಸ್ಚಾರ್ಜ್‌ ಮಾಡಲಾಗಿದೆ.

ಈ ಹಿಂದೆ ‘ಮದಗಜ’ ಸಿನಿಮಾದ ಚಿತ್ರೀಕರಣದ ವೇಳೆಯೂ ಶ್ರೀಮುರಳಿ ಕಾಲಿಗೆ ಏಟು ಮಾಡಿಕೊಂಡಿದ್ದರು. ನಂತರದಲ್ಲಿ ‘ಬಘೀರ’ ಸಿನಿಮಾದ ಶೂಟಿಂಗ್ ವೇಳೆ ಕಾಲಿಗೆ ಗಾಯವಾಗಿತ್ತು. ಇದರಿಂದ ಚೇತರಿಸಿಕೊಂಡು ಮತ್ತೆ ಶೂಟಿಂಗ್‌ ಪುನರಾರಂಭಿಸಿದ್ದರು. ಪ್ರಶಾಂತ ನೀಲ್‌ ಈ ಚಿತ್ರಕ್ಕೆ ಕಥೆ ಬರೆದಿದ್ದು, ಡಾ. ಸೂರಿ ಆಯಕ್ಷನ್‌ ಕಟ್‌ ಹೇಳಿದ್ದಾರೆ. ‘ಬಘೀರ’ನಿಗೆ ನಟಿ ರುಕ್ಮಿಣಿ ವಸಂತ್‌ ಜೋಡಿಯಾಗಿದ್ದು, ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಶ್ರೀಮುರಳಿ ಕಾಣಿಸಿಕೊಂಡಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಪ್ರಮುಖ ಸುದ್ದಿ :-   ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement