ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ … Continued

ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಶಿರಹಟ್ಟಿ ಭಾವೈಕ್ಯ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಅವರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ … Continued

ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯಿಂದ ನನ್ನನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ ಎಂದು ಕೆ.ಎಸ್‌.ಈಶ್ವರಪ್ಪ ಸೋಮವಾರ ಹೇಳಿದ್ದಾರೆ. ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ನನ್ನನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂಬ ವಿಷಯ ಮಾಧ್ಯಮಗಳ ಮೂಲಕವೇ ನನಗೆ ಗೊತ್ತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆ. ಅದರಂತೆ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ … Continued