ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ ಗರುಡಾಚಾರ್‌ ಅವರಿಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಜೊತೆಗೆ ಆ ತೀರ್ಪು ಪ್ರಕಟವಾದ ನಂತರ ಅರ್ಜಿದಾರರು ದಂಡ ಮೊತ್ತವನ್ನು ಪಾವತಿ ಮಾಡಿದ್ದರೆ, ಅದನ್ನು ಕೂಡಲೇ ಹಿಂದಿರುಗಿಸಬೇಕು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಆದೇಶಿಸಿದೆ.
ವಿಚಾರಣಾಧೀನ ನ್ಯಾಯಾಲಯಗಳ ಆದೇಶ ಪ್ರಶ್ನಿಸಿ ಉದಯ ಗರುಡಾಚಾರ ಸಲ್ಲಿಸಿದ್ದ ಕ್ರಿಮಿನಲ್‌ ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕ ಸದಸ್ಯ ಪೀಠ ಪುರಸ್ಕರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಾಲಯ, ಎಲ್ಲಾ ನಾಲ್ಕು ತೀರ್ಪುಗಳು ಅರ್ಜಿದಾರರ ಪರವಾಗಿವೆ ಮತ್ತು ಅವರು ಒಮ್ಮೆಲೆ ಕ್ರಿಮಿನಲ್‌ ವಿಚಾರಣಾ ಪ್ರಕ್ರಿಯೆಯಿಂದ ಮುಕ್ತರಾಗುತ್ತಾರೆ ಎಂದು ಹೇಳಿದೆ.

ಅಪರಾಧ ಪ್ರಕರಣ ಸಂಬಂಧ ದೋಷಾರೋಪ ಹೊರಿಸಿದ ಮತ್ತು ಆ ಸಂಬಂಧ ನ್ಯಾಯಾಲಯವು ಸಂಜ್ಞೇ ತೆಗೆದುಕೊಂಡ ಸಂದರ್ಭದಲ್ಲಿ ತಮ್ಮ ಮೇಲಿನ ಆರೋಪಗಳ ಕುರಿತ ಮಾಹಿತಿಯನ್ನು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಯು ತಿಳಿಸಬೇಕಾಗುತ್ತದೆ. ಆ ಆರೋಪಗಳನ್ನು ಪರಿಗಣಿಸಬೇಕಾಗುತ್ತದೆ. ಆಗ ಅವರನ್ನು ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಿ ಎಂಬುದಾಗಿ ವ್ಯಾಖ್ಯಾನಿಸಬಹುದಾಗಿದೆ. ಎಫ್‌ಐಆರ್‌ ಅಥವಾ ಖಾಸಗಿ ದೂರು ದಾಖಲಾದ ಮಾತ್ರಕ್ಕೆ ಆರೋಪಿಯಾಗಿ ದೃಢಪಟ್ಟು, ಚುನಾವಣಾ ಪ್ರಮಾಣಪತ್ರದಲ್ಲಿ ಪ್ರಕರಣದ ಮಾಹಿತಿ ನೀಡಬೇಕು ಎಂದು ಅರ್ಥವಲ್ಲ ಎಂದು ಪೀಠ ಹೇಳಿದೆ ಎಂದು ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಪ್ರಕರಣವೊಂದರ ಸಂಬಂಧ ದೂರು ದಾಖಲಾಗಿತ್ತು. ಆದರೆ, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಆ ದೂರಿನ ಸಂಬಂಧ ಅರ್ಜಿದಾರರ ವಿರುದ್ಧ ದೋಷಾರೋಪಣೆ ಹೊರಿಸಲಾಗಿರಲಿಲ್ಲ. ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ತೆಗೆದುಕೊಂಡಿರಲಿಲ್ಲ. ಹೀಗಿದ್ದರೂ ಚುನಾವಣೆಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಅರ್ಜಿದಾರರು ತಮ್ಮ ಮೇಲಿನ ಕ್ರಿಮಿನಲ್‌ ಪ್ರಕರಣದ ಮಾಹಿತಿ ಮರೆ ಮಾಚಿದ್ದಾರೆ ಎಂದು ಹೇಳಿ ಅವರನ್ನು ದೋಷಿಯಾಗಿ ಪರಿಗಣಿಸಿದ ಹಾಗೂ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯಗಳ ಕ್ರಮ ಸರಿಯಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಶಾಸಕ ಉದಯ ಗರುಡಾಚಾರ್ 2018 ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣ ಹಾಗೂ ಪತ್ನಿಯ ಬ್ಯಾಂಕ್‌ ವಿವರಗಳನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ಎಚ್‌ ಜಿ ಪ್ರಶಾಂತ ಎಂಬುವರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನಗರದ 42ನೇ ಎಸಿಎಂಎಂ (ಜನ ಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಪ್ರಜಾಪ್ರತಿನಿಧಿ ಕಾಯಿದೆ ಅಡಿಯಲ್ಲಿ ಎರಡು ತಿಂಗಳ ಸಾಧಾರಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ 2022ರ ಅಕ್ಟೋಬರ್‌ 13ರಂದು ತೀರ್ಪು ನೀಡಿತ್ತು.
ಆ ಆದೇಶವನ್ನು ಪುರಸ್ಕರಿಸಿ 2023ರ ಸೆಪ್ಟೆಂಬರ್‌ 11ರಂದು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿತ್ತು. ಈ ಎರಡು ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಉದಯ ಗರುಡಚಾರ್‌ ಅವರು ಹೈಕೋರ್ಟ್‌ಗೆ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement