ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ…

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಶುಕ್ರವಾರ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ನಡೆಯುತ್ತಿದೆ.
ಕೇರಳದ ಎಲ್ಲಾ 20 ಲೋಕಸಭಾ ಸ್ಥಾನಗಳು, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದಲ್ಲಿ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದ 6, ಅಸ್ಸಾಂ ಮತ್ತು ಬಿಹಾರದ ತಲಾ 5 ಕ್ಷೇತ್ರಗಳು, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು ಸ್ಥಾನಗಳು, ಮಣಿಪುರ, ತ್ರಿಪುರಾ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದು ಸ್ಥಾನಗಳಲ್ಲಿ ಮತದಾನ ನಡೆಯಲಿದೆ. .
ಈ ಮೊದಲು 89 ಕ್ಷೇತ್ರಗಳಿಗೆ ಈ ಹಂತದಲ್ಲಿ ಮತದಾನ ನಡೆಯಬೇಕಿತ್ತು. ಆದರೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯೊಬ್ಬರ ನಿಧನದ ನಂತರ ಮಧ್ಯಪ್ರದೇಶದ ಬೇತುಲ್‌ನಲ್ಲಿ ಮತದಾನವನ್ನು ಮರು ನಿಗದಿಪಡಿಸಲಾಗಿದೆ. ಬೆತುಲ್ ನಲ್ಲಿ ಈಗ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
2019 ರಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಈ 89 ಸ್ಥಾನಗಳಲ್ಲಿ 56 ಸ್ಥಾನಗಳನ್ನು ಗೆದ್ದುಕೊಂಡರೆ, ಪ್ರತಿಪಕ್ಷ ಯುಪಿಎ 24 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಪ್ರಮುಖ ಸ್ಪರ್ಧಿಗಳಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ, ಹೇಮಾ ಮಾಲಿನಿ ಮತ್ತು ಅರುಣ ಗೋವಿಲ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಶಶಿ ತರೂರ್ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌ ನಾಐಕ ಎಚ್‌.ಡಿ. ಕುಮಾರಸ್ವಾಮಿ ಇದ್ದಾರೆ.

ಲೋಕಸಭೆ ಚುನಾವಣೆ ಹಂತ 2: ಐವರು ಶ್ರೀಮಂತ ಅಭ್ಯರ್ಥಿಗಳು
ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್‌ನ ಸ್ಪರ್ಧಿಗಳ ಸ್ವಯಂ ಪ್ರಮಾಣ ಪತ್ರಗಳ ವಿಶ್ಲೇಷಣೆಯ ಪ್ರಕಾರ, ‘ಸ್ಟಾರ್ ಚಂದ್ರು’ ಎಂದು ಜನಪ್ರಿಯವಾಗಿರುವ ಕರ್ನಾಟಕ ಕಾಂಗ್ರೆಸ್ ನಾಯಕ ವೆಂಕಟರಮಣೇಗೌಡ ಅವರು 2 ನೇ ಹಂತದ ಮತದಾನದಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿರುವ ಅವರು ₹ 622 ಕೋಟಿ ಆಸ್ತಿ ಘೋಷಿಸಿದ್ದಾರೆ.
ಕರ್ನಾಟಕದ ಬೆಂಗಳೂರು ಗ್ರಾಮಾಂತರದ ಹಾಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ ಅವರು ₹ 593 ಕೋಟಿ ಮೌಲ್ಯದ ಆಸ್ತಿಯೊಂದಿಗೆ ಎರಡನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಕಿರಿಯ ಸಹೋದರ ಸುರೇಶ ಅವರು ಬೆಂಗಳೂರು ಗ್ರಾಮಾಂತರದಿಂದ ಮೂರು ಬಾರಿ ಸಂಸದರಾಗಿದ್ದಾರೆ.
ಮಥುರಾ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುತ್ತಿರುವ ಬಿಜೆಪಿ ಸಂಸದೆ ಹೇಮಾ ಮಾಲಿನಿ ₹ 278 ಕೋಟಿ ಆಸ್ತಿಯೊಂದಿಗೆ ಮೂರನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಸಂಜಯ ಶರ್ಮಾ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು ₹ 232 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ ಮತ್ತು ಒಟ್ಟು ₹ 217.21 ಕೋಟಿ ಆಸ್ತಿ ಘೋಷಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

ಲೋಕಸಭೆ ಚುನಾವಣೆ ಹಂತ 2 : ಅತ್ಯಂತ ಕಡಿಮೆ ಆಸ್ತಿ ಹೊಂದಿರುವ 5 ಅಭ್ಯರ್ಥಿಗಳು
ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ನಾಂದೇಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಕ್ಷ್ಮಣ ನಾಗರಾವ್ ಪಾಟೀಲ್ ಅವರು ಎರಡನೇ ಹಂತದಲ್ಲಿ ಅತಿ ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿಯಾಗಿದ್ದಾರೆ. ಅವರ ಚುನಾವಣಾ ಅಫಿಡವಿಟ್ ಪ್ರಕಾರ, ಅವರು 500 ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.
ಅವರ ನಂತರ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿಯಾದ ರಾಜೇಶ್ವರಿ ಕೆ.ಆರ್. ಅವರು ಕೇರಳದ ಕಾಸರಗೋಡಿನಿಂದ ಸ್ಪರ್ಧಿಸಿದ್ದಾರೆ ಮತ್ತು 1,000 ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ.
ಅಮರಾವತಿಯಿಂದ (ಎಸ್‌ಸಿ) ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿರುವ ಪೃಥ್ವಿಸಾಮ್ರಾಟ್ ಮುಕಿಂದ್ರರಾವ್ ದೀಪವಂಶ ಅವರು ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಒಟ್ಟು 1,400 ರೂ. ಆಸ್ತಿ ಹೊಂದಿದ್ದಾರೆ.
ರಾಜಸ್ಥಾನದ ಜೋಧಪುರದಿಂದ ಸ್ಪರ್ಧಿಸಿರುವ ದಲಿತ ಕ್ರಾಂತಿ ದಳದ ನಾಯಕ ಶಹನಾಜ್ ಬಾನೊ ₹ 2,000 ಮೌಲ್ಯದ ಆಸ್ತಿ ಘೋಷಿಸಿದ್ದಾರೆ. ಕೇರಳದ ಕೊಟ್ಟಾಯಂನಿಂದ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ನಿಂದ ಕಣಕ್ಕಿಳಿದಿರುವ ವಿ.ಪಿ. ಕೊಚುಮೊನ್ ₹ 2,230 ಆಸ್ತಿಯೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.
ಹಂತ 2 : ಶೂನ್ಯ ಆಸ್ತಿ ಅಭ್ಯರ್ಥಿಗಳು
ಶೂನ್ಯ ಆಸ್ತಿ ಹೊಂದಿರುವ ಆರು ಅಭ್ಯರ್ಥಿಗಳಲ್ಲಿ ಕರ್ನಾಟಕದ ಪ್ರಕಾಶ್ ಆರ್‌.ಎ. ಜೈನ್, ರಾಮಮೂರ್ತಿ ಎಂ, ಮತ್ತು ರಾಜಾ ರೆಡ್ಡಿ ಸೇರಿದ್ದಾರೆ. ಶೂನ್ಯ ಆಸ್ತಿ ಹೊಂದಿರುವ ಇತರ ಮೂವರು ಅಭ್ಯರ್ಥಿಗಳಾದ ಕಿಶೋರ ಭೀಮರಾವ್ ಲಬಾಡೆ, ನಾಗೇಶ ಸಂಭಾಜಿ ಗಾಯಕವಾಡ ಮತ್ತು ಜ್ಞಾನೇಶ್ವರ ರಾವ್ಸಾಹೇಬ್ ಕಪಾಟೆ ಮಹಾರಾಷ್ಟ್ರದವರು.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆಬದಿ ರೋಲ್‌ ಮಾರುವ 10 ವರ್ಷದ ಬಾಲಕನ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ; ಸ್ಫೂರ್ತಿಯೂ ಹೌದು; ಸಹಾಯ ಮಾಡುವೆ ಎಂದ ಆನಂದ ಮಹೀಂದ್ರಾ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement