ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ದಾಂಡೇಲಿ : ಗಂಡ ಹೆಂಡತಿಯ ಜಗಳದ ಆರು ವರ್ಷದ ಗಂಡು ಮಗುವೊಂದನ್ನು ನಾಲಾಕ್ಕೆ ಬಿಸಾಕಿದ ನಂತರ ಮಗು ಸಾವಿಗೀಡಾದ ಅಮಾನವೀಯ ಘಟನೆ ಶನಿವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ದಂಪತಿ ಶನಿವಾರ ರಾತ್ರಿ ಜಗಳ‌ ಮಾಡಿಕೊಂಡಿದ್ದಾರೆ. ಜಗಳದಿಂದ ಮಾನಸಿಕವಾಗಿ‌ ನೊಂದ ಮಹಿಳೆ ಆರು ವರ್ಷದ ಮಗು ವಿನೋದ ಎಂಬಾತನನ್ನು ಅಲ್ಲೇ ಹತ್ತಿರಲದಲ್ಲಿದ್ದ ಮೊಸಳೆಗಳಿರುವ ದೊಡ್ಡ ನಾಲಾಕ್ಕೆ ಎಸೆದಿದ್ದಾಳೆ. ಆದರೆ ಮಗು ಮೊಸಳೆಬಾಯಿಗೆ ಸಿಕ್ಕಿ ಮೃತಪಟ್ಟಿದೆ ಎಂದು ವರದಿಯಾಗಿದೆ.

ಘಟನೆ ವಿವರ..
ಹಾಲಮಡ್ಡಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ರವಿಕುಮಾರ ಶೆಳ್ಳೆ ಮತ್ತು ಸಾವಿತ್ರಿ ದಂಪತಿ ಶನಿವಾರ ರಾತ್ರಿ ಯಾವುದೋ ಕಾರಣಕ್ಕೆ ಜಗಳವಾಡಿಕೊಂಡಿದ್ದಾರೆ. ಕೋಪದ ಭರದಲ್ಲಿ ಮಹಿಳೆ ಮಗುವನ್ನು ಒಯ್ದು ಸಮೀಪವೇ ಇದ್ದ ನಾಲಾಕ್ಕೆ ಎಸೆದು ಬಂದಿದ್ದಾಳೆ. ಆದರೆ ಸ್ವಲ್ಪ ಹೊತ್ತಿನ‌ ಬಳಿಕ ಈ ಘಟನೆಯಿಂದ ಮಾನಸಿಕವಾಗಿ ಆಘಾತಗೊಂಡ ಸಾವಿತ್ರಿ ಮಗುವನ್ನು ಎಸೆದು ಬಂದಿರುವುದನ್ನು ಸ್ಥಳೀಯರಿಗೆ ತಿಳಿಸಿದ್ದಾಳೆ.
ತಕ್ಷಣವೇ ಸ್ಥಳೀಯರು ನಾಲಾದ ಹತ್ತಿರ ಬಂದು ಮಗುವಿನ ಹುಡುಕಾಟವನ್ನು ನಡೆಸಿದ್ದಾರೆ. ಹಾಗೂ ಈ ಬಗ್ಗೆ ದಾಂಡೇಲಿಯ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಆಗಮಿಸಿದ್ದಾರೆ. ಹಾಗೂ ಸ್ಥಳೀಯ ಮುಳುಗು ತಜ್ಞರು ಮತ್ತು ಸ್ಥಳೀಯರ ನೆರವಿನೊಂದಿಗೆ ಮಗುವಿನ ಶೋಧ ಕಾರ್ಯವನ್ನು‌ ನಡೆಸಲಾಯಿತು. ಆದರೆ ಭಾನುವಾರ ಬೆಳಿಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಮಗು ಮೊಸಳೆ ದಾಳಿಗೆ ಸಿಲುಕಿತ್ತು ಎನ್ನಲಾಗಿದೆ. ಆರೋಪಿಗಳಾದ ರವಿಕುಮಾರ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದು, ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement