ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್​ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.
ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ ಸ್ಥಳೀಯ ಕಾಂಗ್ರೆಸ್‌ ಮುಖಂಡ ಶಿವಕುಮಾರ ಅವರ ಹೆಗಲ ಮೇಲೆ ಕೈ ಇರಿಸಿದ್ದಾನೆ. ಇದರಿಂದ ಕೋಪಗೊಂಡ ಅವರು ವ್ಯಕ್ತಿ ಕೆನ್ನೆಗೆ ಬಾರಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವೀಡಿಯೊ ಈಗ ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿದೆ.

ಡಿ.ಕೆ.ಶಿವಕುಮಾರ ಅವರು ಕಾರಿನಿಂದ ಇಳಿಯುತ್ತಿದ್ದಾಗ ಅವರನ್ನು ಸ್ವಾಗತಿಸುವಾಗ ಪುರಸಭಾ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಎಂಬವರು ನಸುನಗುತ್ತಾ ಬಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಹೆಗಲ ಮೇಲೆ ಕೈ ಹಾಕಿ ಇಬ್ಬರ ಫೋಟೊ ತೆಗೆಯಲು ಮುಂದಾಗಿದ್ದಾರೆ. ಇದರಿಂದ ಕೋಪಗೊಂಡ ಶಿವಕುಮಾರ ಅವರು ತಕ್ಷಣವೇ ಕಪಾಳಕ್ಕೆ ಹೊಡೆದಿದ್ದಾರೆ. 61ರ ಹರೆಯದ ಶಿವಕುಮಾರ ಕೋಪದಿಂದ ದೂರ ಹೋಗುವಂತೆ ಆತನಿಗೆ ಸನ್ನೆ ಮಾಡಿದ ನಂತರ ಮನಿಯಾರ್‌ ಅವರನ್ನು ಭದ್ರತಾ ಸಿಬ್ಬಂದಿ ಮತ್ತು ಇತರ ಬೆಂಬಲಿಗರು ದೂರ ತಳ್ಳಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ಪಕ್ಷದ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ಮಾಡಲು ಶಿವಕುಮಾರ ಹಾವೇರಿ ಜಿಲ್ಲೆಯ ಸವಣೂರಿಗೆ ಬಂದಿದ್ದರು.
ಕರ್ನಾಟಕದಲ್ಲಿ 28 ಲೋಕಸಭಾ ಸ್ಥಾನಗಳಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಏಪ್ರಿಲ್ 26 ರಂದು 14 ಸ್ಥಾನಗಳಿಗೆ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ ಮತ್ತು ಉಳಿದ 14 ಸ್ಥಾನಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement