ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆ ಬಳಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್(Bhimanna Naik) ಹಾಗೂ ಪೌರಾಯುಕ್ತ ಕಾಂತರಾಜ ಸೇರಿದಂತೆ ಹಲವರ ಮೇಲೆ ಜೇನು ದಾಳಿ ಮಾಡಿದೆ ಎಂದು ವರದಿಯಾಗಿದೆ.
ಶಿರಸಿ ನಗರಕ್ಕೆ ನೀರು ಪೂರೈಸುವ ತಾಲೂಕಿನ ಕೆಂಗ್ರೆ ಹೊಳೆಯಲ್ಲಿರುವ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ ನಡೆಸಿವೆ. ಬುಧವಾರ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ನಗರಸಭೆ ಪೌರಾಯುಕ್ತ ಕಾಂತರಾಜ ಅವರ ಜೊತೆಗೆ ಶಾಸಕ ಭೀಮಣ್ಣ ನಾಯ್ಕ ತೆರಳಿದ್ದರು. ಈ ವೇಳೆ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಾಸಕ ಭೀಮಣ್ಣ ನಾಯ್ಕ, ಪೌರಾಯುಕ್ತ ಕಾಂತರಾಜ ಮತ್ತಿತರರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕಾರಿನಲ್ಲಿ ಕೂಡ್ರಿಸಿ ಬಾಗಿಲು ಮುಚ್ಚಲಾಯಿತು. ನಂತರ ಅವರಿಗೆ ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement