ಸೋಮವಾರಪೇಟೆ : ಎಸ್​ಎಸ್​​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ; ರುಂಡದೊಂದಿಗೆ ಆರೋಪಿ ಪರಾರಿ

ಮಡಿಕೇರಿ: ಬೆಳಿಗ್ಗೆಯಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಖುಷಿಯಲ್ಲಿದ್ದ ಬಾಲಕಿಯೊಬ್ಬಳ ರುಂಡ ಕಡಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದ್ದು, ಆರೋಪಿ ರುಂಡದೊಂದಿಗೆ ಪರಾರಿಯಾಗಿದ್ದಾ‌ನೆ ಎನ್ನಲಾಗಿದೆ.
ಗುರುವಾರವೇ ಅಪ್ರಾಪ್ತ ಬಾಲಕಿಯನ್ನು ಆರೋಪಿ ಪ್ರಕಾಶ ಎಂಬಾತನ ಜೊತೆ ವಿವಾಹ ಮಾಡುವುದಕ್ಕೆ ಪೋಷಕರು ಮುಂದಾಗಿದ್ದರು. ಇದು ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬಾಲಕಿಗೆ ಆರೋಪಿ ಜೊತೆ ನಿಶ್ಚಿತಾರ್ಥ ನಡೆಯುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಆಗಮಿಸಿ ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಾಲ್ಯ ವಿವಾಹ ಅಪ್ರಾಪ್ತಳಿಗೆ ವಿವಾಹ ಮಾಡಬಾರದು ಎಂದು ಪೋಷಕರ ಮನವೊಲಿಸಿದ್ದಾರೆ.

ಇದರಿಂದ ಸಿಟ್ಟಗೆದ್ದಿದ್ದ ಆರೋಪಿ ನಂತರ ರಾತ್ರಿ ಮನೆಗೆ ನುಗ್ಗಿ ಬಾಲಕಿಯನ್ನು ಅಪಹರಿಸಿದ್ದಾನೆ ಎಂದು ಹೇಳಲಾಗಿದೆ. ಕಾಡಂಚಿನ ಪ್ರದೇಶದಲ್ಲಿ ಬಾಲಕಿಯನ್ನು‌ ಕೊಂದು ರುಂಡದೊಂದಿಗೆ ಪರಾರಿಯಾಗಿದ್ದಾನೆ. ಬಾಲಕಿಯ ಮುಂಡ ಮಾತ್ರ ಸಿಕ್ಕಿದ್ದು ಆರೋಪಿಗಾಗಿ ಹಾಗೂ ದೇಹದ ಉಳಿದ ಭಾಗಗಳಿಗಾಗಿ ಹುಡುಕಾಟ ನಡೆದಿದೆ. ಘಟನೆಯಲ್ಲಿ ಬಾಲಕಿಯ ತಾಯಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವಿಚಾರಣೆ ಮಾಡಿದ ಬಳಿಕ ಕೃತ್ಯಕ್ಕೆ ಖಚಿತ ಕಾರಣ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement