ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ (Pavithra Jayaram)ಆಂಧ್ರಪ್ರದೇಶದ ಕರ್ನೂಲು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು, ಭಾನುವಾರ ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಹೈದರಾಬಾದ್ಗೆ ಹೋಗುವ ವೇಳೆ ಮೆಹಬೂಬ್ ನಗರದ ಭೂತ್ಪುರ್ ವ್ಯಾಪ್ತಿಯ ಶೇರಿಪಲ್ಲಿ ಎನ್ನುವ ಗ್ರಾಮದ ಬಳಿ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಪವಿತ್ರಾ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಹೈದರಾಬಾದ್ನಿಂದ ವನಪರ್ತಿಗೆ ಬರುತ್ತಿದ್ದ ಬಸ್ ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ನಟಿ ಪವಿತ್ರಾ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ನಟಿ ಪವಿತ್ರಾ ಅವರು ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರಾಗಿದ್ದಾರೆ. ರೋಬೋ ಫ್ಯಾಮಿಲಿ ಕನ್ನಡ ಧಾರಾವಹಿಗೆ ಪ್ರವೇಶಿಸಿದ್ದ ಅವರು, ಜೋಕಾಲಿ, ನೀಲಿ, ರಾಧಾರಮಣ ಮೊದಲಾದ ಧಾರವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು. ತೆಲುಗಿನ ‘ತ್ರಿನಯನಿ’ ಧಾರವಾಹಿಯಲ್ಲಿ ನಟಿಸಿ ತೆಲುಗಿನಲ್ಲಿಯೂ ಜನಪ್ರಿಯತೆ ಪಡೆದಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ