ನವದೆಹಲಿ : ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ವಿಭವಕುಮಾರ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್ಐಆರ್ನಲ್ಲಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿಯವರ ನಿವಾಸದಿಂದ ದೆಹಲಿ ಪೊಲೀಸ್ ತಂಡವು ಮಧ್ಯಾಹ್ನದ ಸುಮಾರಿಗೆ ವಿಭವಕುಮಾರ ಅವರನ್ನು ಕರೆತಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಚಾರಣೆಗಾಗಿ ಠಾಣೆಗೆ ಕರೆದೊಯ್ಯಲಾಗಿದೆ.
ಸಂಪೂರ್ಣ ಸಹಕಾರದ ಭರವಸೆ ನೀಡಿ ಅಧಿಕಾರಿಗಳಿಗೆ ಇಮೇಲ್ ಕಳುಹಿಸಿದ್ದರೂ ಪೊಲೀಸರಿಂದ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ.
“ನಾವು ಇನ್ನೂ ಪೊಲೀಸರಿಂದ ಯಾವುದೇ ಮಾಹಿತಿಯನ್ನು ಸ್ವೀಕರಿಸಿಲ್ಲ. ನಾವು ತನಿಖೆಯಲ್ಲಿ ಸಹಕರಿಸುತ್ತೇವೆ ಎಂದು ಅವರಿಗೆ ಇ-ಮೇಲ್ ಕಳುಹಿಸಿದ್ದೇವೆ” ಎಂದು ವಿಭವಕುಮಾರ ಅವರ ವಕೀಲ ಕರಣ ಶರ್ಮಾ ತಿಳಿಸಿದ್ದಾರೆ.
ಈ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಕೇಜ್ರಿವಾಲ್ ಅವರ ಮೌನಕ್ಕಾಗಿ ಬಿಜೆಪಿ ತೀವ್ರವಾಗಿ ಟೀಕಿಸಿದೆ
ಸಾಕಷ್ಟು ಪುರಾವೆಗಳ ಹೊರತಾಗಿಯೂ ಅವರ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿಯನ್ನು ಎಎಪಿ ರಕ್ಷಿಸಿದೆ ಎಂದು ಅದು ಆರೋಪಿಸಿದೆ.
ಆಪಾದಿತ ಹಲ್ಲೆ ಘಟನೆಯ ದೆಹಲಿ ಮುಖ್ಯಮಂತ್ರಿ ಮನೆಯಿಂದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ, ಇದರಲ್ಲಿ ಸಿಎಂ ನಿವಾಸದಲ್ಲಿ ನಿಯೋಜಿಸಲಾದ ಸಿಬ್ಬಂದಿ ಮತ್ತು ಎಎಪಿ ರಾಜ್ಯಸಭಾ ಸಂಸದೆ ನಡುವೆ ವಾಗ್ವಾದ ನಡೆಯುವುದನ್ನು ಕಾಣಬಹುದು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಮೂರು ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ನೀಡುವಂತೆ ಸೂಚಿಸಿದೆ. ವರದಿ ಸಿದ್ಧಪಡಿಸುವಂತೆ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಎಸ್. ಕುಶ್ವಾಹ ನೇತೃತ್ವದ ದ್ವಿಸದಸ್ಯರ ತಂಡ ದೆಹಲಿಯಲ್ಲಿರುವ ಸ್ವಾತಿ ಮಲಿವಾಲ್ ನಿವಾಸಕ್ಕೆ ಭೇಟಿ ನೀಡಿದ್ದು, ಮೇ 13ರಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡಿದ್ದರು. ಅವರ ಹೇಳಿಕೆ ಆಧಾರದ ಮೇಲೆ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವಕುಮಾರ ಅವರನ್ನು ಬಂಧಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ