ಹನಿಟ್ರ್ಯಾಪ್‌ ಗೆ ಕೆಡವಿ ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಹತ್ಯೆ..? : ಢಾಕಾದಲ್ಲಿ ಮಹಿಳೆ ಬಂಧನ

ಕೋಲ್ಕತ್ತಾ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನ್ವರ್ ಅವರು ಕೋಲ್ಕತ್ತಾದಲ್ಲಿ ಹತ್ಯೆಯಾಗುವ ಮೊದಲು ಅವರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿದ್ದಾರೆ ಎನ್ನಲಾದ ಮಹಿಳೆಯನ್ನು ಢಾಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಶಿಲಾಂತಿ ರೆಹಮಾನ್ ಎಂದು ಗುರುತಿಸಲಾದ ಮಹಿಳೆ ಬಾಂಗ್ಲಾದೇಶದ ಪ್ರಜೆ ಮತ್ತು ಪ್ರಮುಖ ಆರೋಪಿ ಅಖ್ತರುಝಾಮಾನ್ ಶಾಹಿನ್ ಎಂಬಾತನ ಗೆಳತಿ ಎಂದು ವರದಿಯಾಗಿದೆ.
ಅಮೆರಿಕದ ಪ್ರಜೆಯಾಗಿರುವ ಅಖ್ತರುಜ್ಜಮಾನ್ ಅವಾಮಿ ಲೀಗ್ ಸಂಸದ ಅನ್ವರುಲ್ ಅಜೀಂ ಅನ್ವರ್ ಅವರ ಸ್ನೇಹಿತನಾಗಿದ್ದ. ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ಅಖ್ತರುಝಾಮಾನ್ ಬಾಡಿಗೆ ಮನೆಯಲ್ಲಿಯೇ ಬಾಂಗ್ಲಾ ಸಂಸದರನ್ನು ಹತ್ಯೆ ಮಾಡಲಾಗಿದೆ. ಅನ್ವರುಲ್ ಹತ್ಯೆಯಾದಾಗ ಶಿಲಾಂತಿ ರೆಹಮಾನ್‌ ಕೋಲ್ಕತ್ತಾದಲ್ಲಿ ಇದ್ದಳು ಮತ್ತು ಮೇ 15 ರಂದು ಪ್ರಮುಖ ಶಂಕಿತ ಕೊಲೆಗಾರ ಅಮಾನುಲ್ಲಾ ಅಮನ್ ಜೊತೆಗೆ ಢಾಕಾಗೆ ಮರಳಿದ್ದಳು ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್‌ ಅವರು ಚಿಕಿತ್ಸೆಗೆಂದು ಕೋಲ್ಕತ್ತಾಕ್ಕೆ ಬಂದು ಮೇ 18ರಂದು ಕಾಣೆಯಾಗಿದ್ದರು. ಅವರ ಮೃತದೇಹ ಮೇ 22ರಂದು ಕೋಲ್ಕತ್ತಾದ ಅಪಾರ್ಟ್‌ಮೆಂಟ್ ಒಂದರಲ್ಲಿ ಪತ್ತೆಯಾಗಿತ್ತು. ಅಂದೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಾಂಗ್ಲಾ ಪೊಲೀಸರು ಬಂಧಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.
ಅನ್ವರುಲ್ ಅವರನ್ನು ಬಾಂಗ್ಲಾದೇಶದಿಂದ ಕೋಲ್ಕತ್ತಾಗೆ ಕರೆತರಲು ಶಿಲಾಂತಿ ರೆಹಮಾನ್‌ ಅವಳನ್ನು ಅಖ್ತರುಜ್ಜಮಾನ್ ಹನಿ ಟ್ರ್ಯಾಪ್ ಆಗಿ ಬಳಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ. ಹತ್ಯೆಯ ಉದ್ದೇಶವನ್ನು ಪೊಲೀಸರು ಇನ್ನೂ ಔಪಚಾರಿಕವಾಗಿ ಘೋಷಿಸದಿದ್ದರೂ, ಹಣಕಾಸುಗಳ ವಿವಾದದಿಂದಾಗಿ ಅಖ್ತರುಝಮಾನ್ ಬಾಂಗ್ಲಾದೇಶದ ಸಂಸದರನ್ನು ಕೊಲ್ಲಿಸಿದ್ದಾನೆ. ಹತ್ಯೆ ಅಪರಾಧದಲ್ಲಿ ಭಾಗಿಯಾದವರಿಗೆ ಅಖ್ತರುಜ್ಜಮಾನ್ ಸುಮಾರು 5 ಕೋಟಿ ರೂ. ಹಣ ನೀಡಿದ್ದ ಎಂದು ಮೂಲಗಳು ಹೇಳುತ್ತವೆ.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

ಮಹಿಳೆಯೊಬ್ಬಳು ಅನಾರ್ ಅವರನ್ನು ಮೇ 16ರಂದು ಕೋಲ್ಕತ್ತಾದ ನ್ಯೂ ಟೌನ್ ಫ್ಲಾಟ್‌ಗೆ ಕರೆದುಕೊಂಡು ಹೋಗಿದ್ದಳು. ಈ ವೇಳೆ ಅವರ ಹಿಂದೆ ಇದೆ ಫ್ಲಾಟ್‌ಗೆ ವ್ಯಕ್ತಿಯೊಬ್ಬ ಹೋಗಿದ್ದ. ಆದರೆ ಮಹಿಳೆ ಹಾಗೂ ಆ ವ್ಯಕ್ತಿ ದೊಡ್ಡ ಬ್ಯಾಗ್‌ ಸಮೇತ ಹೊರಗೆ ಬಂದಿರುವುದು ಕಂಡಿದೆ, ಮಾರನೇ ದಿನ ಅನಾರ್ ಅವರು ಹೊರಗೆ ಬರುವುದು ಸಿಸಿಟಿವಿಯಲ್ಲಿ ಕಂಡಿಲ್ಲ ಎಂದು ಪೊಲೀಸ್‌ ಮೂಲಗಳು ಹೇಳುತ್ತವೆ.
ಪಶ್ಚಿಮ ಬಂಗಾಳದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂಬೈನಲ್ಲಿ ಶಂಕಿತನನ್ನು ಬಂಧಿಸಿದ ನಂತರ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಶಂಕಿತ ಜಿಹಾದ್ ಹವ್ಲಾದರ್, ನ್ಯೂ ಟೌನ್ ಫ್ಲಾಟ್‌ನಲ್ಲಿ ಇತರ ನಾಲ್ವರು ಜೊತೆಗೂಡಿ ಬಾಂಗ್ಲಾದೇಶಿ ಸಂಸದನನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರಣೆಯ ವೇಳೆ, ಅಖ್ತರುಝಾಮಾನ್ ಆದೇಶದ ಮೇರೆಗೆ ಕೊಲೆ ನಡೆಸಲಾಗಿದೆ ಎಂದು ಹೇಳಿದ್ದಾನೆ.

ಸಂಸದರನ್ನು ಕೊಂದ ನಂತರ, ಅವರು ಅನ್ವರುಲ್‌ ಅವರ ಸಾಕ್ಷ್ಯ ನಾಶಮಾಡಲು ಇಡೀ ದೇಹದ ಚರ್ಮ ಸುಲಿದು, ಮಾಂಸವನ್ನು ಕತ್ತರಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ನಂತರ ಮೂಳೆಗಳನ್ನು ತುಂಡುಗಳಾಗಿ ಕತ್ತರಿಸಿ ಹಲವಾರು ಪ್ಲಾಸ್ಟಿಕ್ ಬ್ಯಾಗ್‌ಗಳಲ್ಲಿ ಹಾಕಲಾಯಿತು. ನಂತರ ಕೊಲೆಗಾರರು ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಪ್ಯಾಕೆಟ್‌ಗಳನ್ನು ಎಸೆದಿದ್ದಾರೆ. ವೃತ್ತಿಪರ ಕಟುಕ ಜಿಹಾದ್‌ ಜಿಹಾದ್ ಹವ್ಲಾದರ್ ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯ ಬರಾಕ್‌ಪುರ ನಿವಾಸಿಯಾಗಿದ್ದು, ಕೆಲ ದಿನಗಳಿಂದ ಮುಂಬೈನಲ್ಲಿ ಅಕ್ರಮವಾಗಿ ನೆಲೆಸಿದ್ದ. ಆತ ಎರಡು ತಿಂಗಳ ಹಿಂದೆ ಕೋಲ್ಕತ್ತಾಗೆ ಆಗಮಿಸಿದ್ದ ಎಂದು ಸಿಐಡಿ ಮೂಲಗಳು ಹೇಳಿವೆ.
‘ಅವಾಮಿ ಲೀಗ್‌ನ ಸಂಸದ ಅನ್ವರುಲ್‌ ಅವರು ಕೋಲ್ಕತ್ತದ ಫ್ಲಾಟ್‌ವೊಂದರಲ್ಲಿ ಕೊಲೆಯಾಗಿದ್ದಾರೆ. ಕೊಲೆ ಮಾಡಿದ ಆರೋಪಿಗಳೆಲ್ಲರೂ ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ಇದೊಂದು ಯೋಜಿತ ಕೃತ್ಯವಾಗಿದೆ’ ಎಂದು ಬಾಂಗ್ಲಾದೇಶದ ಗೃಹ ಸಚಿವ ಅಸಾದುಜ್ಮಾನ್‌ ಖಾನ್ ಅವರು ಬುಧವಾರ ತಿಳಿಸಿದ್ದರು.
ಮಹಿಳೆ ಹಾಗೂ ಅವಳ ಜೊತೆ ಇದ್ದ ವ್ಯಕ್ತಿಯ ಬಂಧನಕ್ಕೆ ತೀವ್ರ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement