ರಾಯ್ಪುರ: ಛತ್ತೀಸ್ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಏಳು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರಭಾತಕುಮಾರ ತಿಳಿಸಿದ್ದಾರೆ. ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋವಾದಿ ಸಮವಸ್ತ್ರದಲ್ಲಿದ್ದ ಏಳು ಮಂದಿ ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ. ದಾಂತೇವಾಡ, ನಾರಾಯಣಪುರ ಮತ್ತು ಬಸ್ತಾರ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ಗೆ ಸೇರಿದ ಸಿಬ್ಬಂದಿ, ಬಸ್ತಾರ್ ಫೈಟರ್ಸ್ ಮತ್ತು ವಿಶೇಷ ಕಾರ್ಯಪಡೆ – ರಾಜ್ಯ ಪೊಲೀಸ್ನ ಎಲ್ಲಾ ಘಟಕಗಳು – ಮಾವೋವಾದಿಗಳ ಇಂದ್ರಾವತಿ ಪ್ರದೇಶ ಸಮಿತಿಯ ಕೇಡರ್ಗಳ ಉಪಸ್ಥಿತಿಯ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದರು.
ರಾಜ್ಯದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಈ ವರ್ಷ ಇದುವರೆಗೆ 112 ನಕ್ಸಲೀಯರು ಹತರಾಗಿದ್ದಾರೆ.ಏಪ್ರಿಲ್ 30 ರಂದು ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ನಕ್ಸಲೀಯರು ಕೊಲ್ಲಲ್ಪಟ್ಟರು. ಪೋಲೀಸರ ಪ್ರಕಾರಏಪ್ರಿಲ್ 16 ರಂದು ಕಂಕೇರ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು 29 ನಕ್ಸಲೀಯರನ್ನು ಹೊಡೆದುರುಳಿಸಿದ್ದವು.
ಮೇ 10 ರಂದು, ಬಿಜಾಪುರ ಜಿಲ್ಲೆಯ ಪಿಡಿಯಾ ಗ್ರಾಮದ ಬಳಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲೀಯರನ್ನು ಹೊಡೆದುರುಳಿಸಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ