ಕೋಲ್ಕತ್ತಾ: ಲೋಕಸಭೆ ಚುನಾವಣೆಯ ಶನಿವಾರ ನಡೆದ ಆರನೇ ಹಂತದ ಮತದಾನದ ವೇಳೆ ಜಾರ್ಗ್ರಾಮದ ಬಿಜೆಪಿ ಅಭ್ಯರ್ಥಿ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಗಾರ್ಬೆಟಾದ ಮಂಗಲಪೋಟಾ ಪ್ರದೇಶದಿಂದ ದಾಳಿಕೋರರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿರುವ ವೀಡಿಯೊ ಹೊರಹೊಮ್ಮಿದೆ.
ಬಿಜೆಪಿ ಅಭ್ಯರ್ಥಿಯಾದ ಪ್ರಣತ್ ತುಡು ಅವರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿ ಶೀಲ್ಡ್ಗಳನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ವೀಡಿಯೊ ದೃಶ್ಯಗಳು ತೋರಿಸಿವೆ., ಕೆಲವರು ಅವರನ್ನು ಹಿಂಬಾಲಿಸಿದರು. ಕೆಲವರು ತೂರಿದ ದೊಡ್ಡ ಕಲ್ಲು ಕೇವಲ ಸೆಂಟಿಮೀಟರ್ಗಳಷ್ಟು ದೂರದಲ್ಲಿ ವ್ಯಕ್ತಿಯೊಬ್ಬರಿಗೆ ಬಡಿದಿದೆ. ಕೆಲವು ಕಲ್ಲುಗಳು ಅವರತ್ತ ತೂರಿ ಬರುತ್ತಿದ್ದಂತೆಯೇ ಅಭ್ಯರ್ಥಿ, ಭದ್ರತಾ ಸಿಬ್ಬಂದಿ ಮತ್ತು ಕೆಲವು ಮಾಧ್ಯಮದ ಸಿಬ್ಬಂದಿ ಈದರಿಂದ ತಪ್ಪಿಸಿಕೊಳ್ಳಲು ಓಡುತ್ತಿರುವುದನ್ನು ಕಾಣಬಹುದು.
ಘಟನೆಗೆ “ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೂಂಡಾಗಳು ಕಾರಣ” ಎಂದು ತುಡು ಆರೋಪಿಸಿದ್ದಾರೆ ಮತ್ತು ಅವರ ಇಬ್ಬರು ಭದ್ರತಾ ಸಿಬ್ಬಂದಿ ತಲೆಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂದು ಹೇಳಿದ್ದಾರೆ. ಮತಗಟ್ಟೆಯ ಹೊರಗೆ ತನ್ನ ಮತ ಚಲಾಯಿಸಲು ಸರದಿಯಲ್ಲಿ ನಿಂತಿದ್ದ ಮಹಿಳೆಯೊಬ್ಬರ ಮೇಲೆ ಬಿಜೆಪಿ ಅಭ್ಯರ್ಥಿಯ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದ್ದು ಪ್ರತಿಭಟನೆಗೆ ಕಾರಣವಾಯಿತು ಎಂದು ಆಡಳಿತಾರೂಢ ಟಿಎಂಸಿ ಹೇಳಿದೆ.
ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಬಿಜೆಪಿಯ ಬಂಗಾಳದ ಸಹ-ಪ್ರಭಾರಿ, ಅಮಿತ್ ಮಾಳವಿಯಾ ಕೂಡ ಬಿಜೆಪಿ ಅಭ್ಯರ್ಥಿ ಹಾಗೂ ಭದ್ರಾ ಸಿಬ್ಬಂದಿ ಮೇಲಿನ ದಾಳಿಗೆ ಟಿಎಂಸಿಯನ್ನು ದೂಷಿಸಿದ್ದಾರೆ ಮತ್ತು ಜನರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪಕ್ಷವನ್ನು ಹೊತಹಾಕಲು ಮತ ಹಾಕುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಪ್ರಕಾರ, ತಮ್ಮ ಪಕ್ಷದ ಏಜೆಂಟರನ್ನು ಒಳಗೆ ಬಿಡುತ್ತಿಲ್ಲ ಎಂಬ ಮಾಹಿತಿ ಸಿಕ್ಕ ನಂತರ ಅಭ್ಯರ್ಥಿ ಪ್ರಣತ್ ತುಡು ಗಾರ್ಪೇಟಾದ ಕೆಲವು ಮತಗಟ್ಟೆಗಳಿಗೆ ಹೋಗುತ್ತಿದ್ದರು. “ಇದ್ದಕ್ಕಿದ್ದಂತೆ, ರಸ್ತೆಗಳನ್ನು ತಡೆದ ಟಿಎಂಸಿ ಗೂಂಡಾಗಳು ನನ್ನ ಕಾರಿಗೆ ಇಟ್ಟಿಗೆಗಳನ್ನು ಎಸೆಯಲು ಪ್ರಾರಂಭಿಸಿದರು. ನನ್ನ ಭದ್ರತಾ ಸಿಬ್ಬಂದಿ ತಡೆಯಲು ಪ್ರಯತ್ನಿಸಿದಾಗ ಅವರು ಗಾಯಗೊಂಡರು. ನನ್ನ ಜೊತೆಗಿದ್ದ ಇಬ್ಬರು ಸಿಐಎಸ್ಎಫ್ ಜವಾನರ ತಲೆಗೆ ಗಾಯವಾಗಿ ಆಸ್ಪತ್ರೆಗೆ ಸೇರಿಸಬೇಕಾಯಿತು” ಎಂದು ಪ್ರಣತ್ ತುಡು ಹೇಳಿದ್ದಾರೆ.
ಆದಾಗ್ಯೂ, ಪ್ರಣತ್ ತುಡು ಅವರ ಭದ್ರತಾ ಸಿಬ್ಬಂದಿ ಮತದಾನ ಮಾಡಲು ಸರದಿಯಲ್ಲಿ ನಿಂತಿದ್ದ ಮಹಿಳೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಟಿಎಂಸಿ ಹೇಳಿಕೊಂಡಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು ಎಂದು ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ. ಮಾಧ್ಯಮದವರು ಬಳಸುತ್ತಿದ್ದ ವಾಹನಗಳನ್ನೂ ಗುಂಪು ಧ್ವಂಸಗೊಳಿಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ತಂಡವನ್ನು ಪ್ರದೇಶಕ್ಕೆ ಕಳುಹಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.
ಜಾರ್ಗ್ರಾಮ ಲೋಕಸಭಾ ಕ್ಷೇತ್ರವು 2019 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದ 18 ಕ್ಷೇತ್ರಗಳಲ್ಲಿ ಒಂದಾಗಿದೆ. 2019 ರಲ್ಲಿ ಬಿಜೆಪಿ ಅಭ್ಯರ್ಥಿ ಕುನಾರ್ ಹೆಂಬ್ರಾಮ್ ಅವರು ತೃಣಮೂಲ ಪಕ್ಷದ ಬಿರ್ಬಹಾ ಸರನ್ ಅವರನ್ನು ಕೇವಲ 12,000 ಮತಗಳ ಅಂತರದಿಂದ ಸೋಲಿಸಿದ್ದರು.
ಈ ಬಾರಿ ಪ್ರಣತ್ ತುಡು, ತೃಣಮೂಲ ಕಾಂಗ್ರೆಸ್ನ ಕಲಿಪಾದ ಸೊರೆನ್ ಮತ್ತು ಸಿಪಿಎಂನ ಸೋನಾಮಮು ಮುರ್ಮು (ತುಡು) ನಡುವೆ ಸ್ಪರ್ಧೆ ಏರ್ಪಟ್ಟಿದೆ.
ನಿಮ್ಮ ಕಾಮೆಂಟ್ ಬರೆಯಿರಿ