ಇವಿಎಂ ಧ್ವಂಸ : ಬಿಜೆಪಿ ಅಭ್ಯರ್ಥಿ ಪ್ರಶಾಂತ ಜಗದೇವ ಬಂಧನ

ಭುವನೇಶ್ವರ : ಒಡಿಶಾದ ಖುರ್ದಾದಲ್ಲಿ ಇವಿಎಂ ಧ್ವಂಸಗೊಳಿಸಿದ ಆರೋಪದ ಮೇರೆಗೆ ಬಿಜೆಪಿ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ಖುರ್ದಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಚಿಲಿಕಾದ ಬಿಜೆಪಿ ಶಾಸಕ ಪ್ರಶಾಂತ ಜಗದೇವ ಅವರನ್ನು ಶನಿವಾರ ಇವಿಎಂಗೆ ಹಾನಿಗೊಳಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಬೇಗನಿಯಾ ವಿಧಾನಸಭಾ ಕ್ಷೇತ್ರದ ಬೋಲಗಾಡ್ ಬ್ಲಾಕ್‍ನ ಕೌನ್ರಿಪಟ್ನಾದ ಮತಗಟ್ಟೆಗೆ ಮತ ಚಲಾಯಿಸಲು ಪ್ರಶಾಂತ ಜಗದೇವ ಅವರು ಪತ್ನಿಯೊಂದಿಗೆ ಆಗಮಿಸಿದ್ದರು. ಈ ವೇಳೆ ಇವಿಎಂನಲ್ಲಿನ ತಾಂತ್ರಿಕ ದೋಷದಿಂದಾಗಿ ಅವರು ಮತಚಲಾಯಿಸಲು ಕೆಲ ಸಮಯ ಕಾಯಬೇಕಾಗಿ ಬಂತು. ಇದರಿಂದ ಕೋಪಗೊಂಡ ಅವರು ಚುನಾವಣಾ ಸಿಬ್ಬಂದಿ ಮೇಲೆ ರೇಗಾಡಿದ್ದಾರೆ. ನಂತರ .ಬಳಿಕ ಇವಿಎಂ ಅನ್ನು ಎಳೆದಾಡಿದ್ದಾರೆ. ಎಳೆದ ರಭಸಕ್ಕೆ ಅದು ಕೆಳಗೆ ಬಿದ್ದು ಒಡೆದು ಹೋಗಿದೆ.

ಪ್ರಿಸೈಡಿಂಗ್‌ ಅಧಿಕಾರಿಯ ದೂರಿನ ಮೇರೆಗೆ ಶಾಸಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅವಿನಾಶಕುಮಾರ ತಿಳಿಸಿದ್ದಾರೆ. ಜಗದೇವ ಅವರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಮತ್ತು ಅವರು ಪ್ರಸ್ತುತ ಖುರ್ದಾ ಜೈಲಿನಲ್ಲಿದ್ದಾರೆ.
ಶಾಸಕರು ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದರು, ಮತಗಟ್ಟೆಯಲ್ಲಿ ಗೊಂದಲ ಉಂಟು ಮಾಡಿದರು ಮತ್ತು ಮತಗಟ್ಟೆ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಪ್ರಿಸೈಡಿಂಗ್‌ ಅಧಿಕಾರಿ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಮಾಡಿದ್ದೇವೆ ಎಂದು ಎಸ್ಪಿ ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿ :-   ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ...!

ಆದರೆ ಪ್ರಶಾಂತ ಜಗದೇವ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಶಾಸಕರು ಸೇರಿದಂತೆ ಹಲವು ಮತದಾರರೊಂದಿಗೆ ಪ್ರಿಸೈಡಿಂಗ್‌ ಅಧಿಕಾರಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು. ಏತನ್ಮಧ್ಯೆ, ರಾಜ್ಯದ ಆಡಳಿತಾರೂಢ ಬಿಜೆಡಿ ಕೂಡ ಮುಖ್ಯ ಚುನಾವಣಾ ಅಧಿಕಾರಿಗೆ (ಸಿಇಒ) ದೂರು ಸಲ್ಲಿಸಿದ್ದು, ಪ್ರಶಾಂತ ಜಗದೇವ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಜಗದೇವ ಮತಗಟ್ಟೆಯಲ್ಲಿ ಮತಗಟ್ಟೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ನಂತರ ಭುವನೇಶ್ವರ ಸಂಸದ ಅಪರಾಜಿತಾ ಸಾರಂಗಿ ಅವರ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಬಿಜೆಡಿ ವಕ್ತಾರ ಸಸ್ಮಿತ್ ಪಾತ್ರ ಆರೋಪಿಸಿದ್ದಾರೆ. ರಾಜ್ಯದ ಆರು ಲೋಕಸಭೆ ಮತ್ತು 42 ವಿಧಾನಸಭಾ ಸ್ಥಾನಗಳಿಗೆ ಶನಿವಾರ ಏಕಕಾಲದಲ್ಲಿ ಮತದಾನ ನಡೆಯಿತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement