ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಜರ್ಮನಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ವರದಿಗಳು ತಿಳಿಸಿವೆ.
ಲೈಂಗಿಕ ಕಿರುಕುಳದ ಆರೋಪದ ನಂತರ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಈಗ ಅವರು ಮ್ಯೂನಿಚ್ನಿಂದ ಬೆಂಗಳೂರಿಗೆ ವಿಮಾನ ಏರಿದ್ದು, ಅವರು ಬೆಳಿಗ್ಗೆ 11: 20 ಕ್ಕೆ (ಸ್ಥಳೀಯ ಕಾಲಮಾನ) ವಿಮಾನವನ್ನು ಏರಿದ್ದಾರೆ ಎಂದು ಹೇಳಲಾಗಿದೆ. H764 ವಿಮಾನ ಮ್ಯುನಿಚ್ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದೆ. ಈಗಾಗಲೇ ಲಗೇಜ್ ಚೆಕ್ ಇನ್ ಮಾಡಿಸಿರುವ ಪ್ರಜ್ವಲ್, ಬ್ಯುಸಿನೆಸ್ ಕ್ಲಾಸ್ ಪ್ರಯಾಣಿಕರ ಜೊತೆ ಕುಳಿತುಕೊಂಡಿದ್ದಾರೆ. ಅವರು ಮೇ 31ರ ತಡರಾತ್ರಿ ಅಥವಾ ಮುಂಜಾನೆ ಬೆಂಗಳೂರಿಗೆ ಬಂದಿಳಿಯುವ ನಿರೀಕ್ಷೆಯಿದೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ಅವರು ಲೈಂಗಿಕ ದೌರ್ಜನ್ಯದ ಆರೊಪಗಳ ನಂತರ ಏಪ್ರಿಲ್ನಲ್ಲಿ ದೇಶವನ್ನು ತೊರೆದಿದ್ದರು, ಅವರು ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವೀಡಿಯೊಗಳು ಹೊರಹೊಮ್ಮಿದ್ದವು. ಪ್ರಜ್ವಲ್ ವಿರುದ್ಧ ಇಲ್ಲಿಯವರೆಗೆ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ಈ ವಾರದ ಆರಂಭದಲ್ಲಿ, ಪ್ರಜ್ವಲ್ ರೇವಣ್ಣ ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿದರು ತಾಹೂ ತಾನು ಮೇ 31 ರಂದು ತನಿಖಾ ತಂಡದ ಮುಂದೆ ಹಾಜರಾಗುವುದಾಗಿ ಮತ್ತು ವಿಚಾರಣೆಗೆ ಸಹಕರಿಸುವುದಾಗಿ ಅದರಲ್ಲಿ ಹೇಳಿದ್ದರು. ಅಲ್ಲದೆ, ತಮ್ಮ ವಿರುದ್ಧದ ಪ್ರಕರಣಗಳು ಸುಳ್ಳು ಎಂದೂ ಅವರು ಹೇಳಿದ್ದಾರೆ.
ವೀಡಿಯೊಗಳು ಹೊರಹೊಮ್ಮಿದ ನಂತರ ತಾನು ಖಿನ್ನತೆಗೆ ಒಳಗಾಗಿದ್ದೆ ಮತ್ತು ಹಾಸನದಲ್ಲಿ ರಾಜಕೀಯ ಶಕ್ತಿಗಳು ತನ್ನ ವಿರುದ್ಧ ಕೆಲಸ ಮಾಡುತ್ತಿವೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಪ್ರಚಾರ ಮಾಡಲು ಪ್ರಾರಂಭಿಸಿದರು ಮತ್ತು ರಾಜಕೀಯವಾಗಿ ನನ್ನ ವಿರುದ್ಧ ಪಿತೂರಿ ನಡೆಸಿದರು. ನಾನು ಖಿನ್ನತೆಗೆ ಒಳಗಾದೆ. ಹೀಗಾಗಿ ಐಸೊಲೇಶನ್ಗೆ ಹೋದೆ ಎಂದು ಅವರು ಸುಮಾರು ಮೂರು ನಿಮಿಷಗಳ ವೀಡಿಯೊದಲ್ಲಿ ಹೇಳಿದ್ದಾರೆ.
ಪ್ರಜ್ವಲ್ ಅವರು ತಮ್ಮ ಅಜ್ಜ ಮತ್ತು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಭಾರತಕ್ಕೆ ಹಿಂತಿರುಗಿ ತನಿಖೆಯನ್ನು ಎದುರಿಸುವಂತೆ ಪತ್ರ ಬರೆದ ಕೆಲವೇ ದಿನಗಳಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ