ಕನ್ಯಾಕುಮಾರಿ : ಇಲ್ಲಿನ ವಿವೇಕಾನಂದ ಬಂಡೆ ಸ್ಮಾರಕ(Vivekananda Rock Memorial)ದಲ್ಲಿ ಸೂರ್ಯೋದಯದ ಸಮಯದಲ್ಲಿ ‘ಸೂರ್ಯ ಅರ್ಘ್ಯ’ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿ ತಮ್ಮ ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋದಿ ಅವರು ‘ಸೂರ್ಯನಿಗೆ ಅರ್ಘ್ಯ’ವನ್ನು ನೀಡಿದರು, ಇದು ಸೂರ್ಯನ ರೂಪದಲ್ಲಿ ಸರ್ವಶಕ್ತನಿಗೆ ನಮಸ್ಕಾರಗಳನ್ನು ಒಳಗೊಂಡ ಅಧ್ಯಾತ್ಮಿಕ ಪದ್ಧತಿಗೆಸಂಬಂಧಿಸಿದ ಒಂದು ಆಚರಣೆಯಾಗಿದೆ.
ಪ್ರಧಾನಮಂತ್ರಿಯವರು ಸಾಂಪ್ರದಾಯಿಕ, ಸಣ್ಣ ಪಾತ್ರೆಯಿಂದ ಸ್ವಲ್ಪ ನೀರನ್ನು ಸಮುದ್ರಕ್ಕೆ ನೈವೇದ್ಯವಾಗಿ (ಅರ್ಘ್ಯ) ಸುರಿದರು ಮತ್ತು ಅವರ ಜಪ ಮಣಿಗಳನ್ನು (ಜಪ ಮಾಲಾ) ಬಳಸಿ ಪ್ರಾರ್ಥಿಸಿದರು. ಮೋದಿ ಅವರು ಕೇಸರಿ ವಸ್ತ್ರವನ್ನು ಧರಿಸಿದ್ದರು ಮತ್ತು ನಂತರ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಕೈಯಲ್ಲಿ ‘ಜಪ ಮಾಲೆ’ ಹಿಡಿದುಕೊಂಡು ಸ್ವಲ್ಪ ಹೊತ್ತು ಮಂಟಪದ ಸುತ್ತಲೂ ನಡೆದರು.
ಕನ್ಯಾಕುಮಾರಿಯು ಸೂರ್ಯೋದಯ ಮತ್ತು ಸೂರ್ಯಾಸ್ತಕ್ಕೆ ಹೆಸರುವಾಸಿಯಾಗಿದೆ. ಇದು ಹಿಂದೂ ಮಹಾಸಾಗರಕ್ಕೆ ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರ ಸೇರುವ ಸಂಗಮ ಸ್ಥಳವಾಗಿದೆ. ಮತ್ತು ವಿವೇಕಾನಂದ ಬಂಡೆ ಸ್ಮಾರಕವು ಸಮುದ್ರ ತೀರದ ಸಮೀಪವಿರುವ ಒಂದು ಸಣ್ಣ ದ್ವೀಪದಲ್ಲಿದೆ. ವಿವೇಕಾನಂದ ರಾಕ್ ಸ್ಮಾರಕದಲ್ಲಿ, ಪ್ರಧಾನಮಂತ್ರಿಯವರು ಮೇ 30 ರ ಸಂಜೆ ಧ್ಯಾನವನ್ನು ಪ್ರಾರಂಭಿಸಿದರು ಮತ್ತು ಅವರು ಅದನ್ನು ಶನಿವಾರದ ಸಂಜೆ ಪೂರ್ಣಗೊಳಿಸಲು ನಿರ್ಧರಿಸಿದ್ದಾರೆ. ಅನಂತರ ಸಮೀಪವೇ ಇರುವ ತಿರುವಳ್ಳುವರ ಅವರ ಪ್ರತಿಮೆಗೂ ಭೇಟಿ ನೀಡುವ ಸಾಧ್ಯತೆಯಿದೆ.
ನಿಮ್ಮ ಕಾಮೆಂಟ್ ಬರೆಯಿರಿ