ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮುಂದುವರಿದಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ರಷ್ಟು ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ವಿಜಯಪುರ ಮತ್ತು ಕೊಪ್ಪಳಕ್ಕೆ ಆರೇಂಜ್ ಹಾಗೂ ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಗೇರುಸೊಪ್ಪ, ಕ್ಯಾಸಲ್ರಾಕ್, ಅಂಕೋಲಾದಲ್ಲಿ ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೋಟದಲ್ಲಿ ಹೆಚ್ಚು ಮಳೆಯಾಗಿದೆ.
ಉಳಿದಂತೆ ಗೋಕರ್ಣ, ಕದ್ರಾ, ಶಿರಾಲಿ, ಆಲಮಟ್ಟಿ, ಆಗುಂಬೆ, ಸಿದ್ದಾಪುರ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಮಂಕಿ, ಕುಂದಾಪುರ, ಬೆಳಗಾವಿ, ಪಣಂಬೂರು, ಮುಲ್ಕಿ, ಪುತ್ತೂರು, ನಿಪ್ಪಾಣಿ, ತಾಳಗುಪ್ಪದಲ್ಲಿ ಜೋರಾಗಿ ಮಳೆಯಾಗಿದೆ. ಉಡುಪಿ, ತಾಳಿಕೋಟೆ, ಬಿಳಗಿ, ಶೃಂಗೇರಿ, ಭಾಗಮಂಡಲ, ಸುಳ್ಯ, ಉಪ್ಪಿನಂಗಡಿ, ಮಂಗಳೂರು, ಮಾಣಿ, ಸೇಡಬಾಳ, ಬಾಳೆಹೊನ್ನೂರು, ಜಯಪುರ, ಚಿಕ್ಕೋಡಿ, ಬೆಳ್ತಂಗಡಿ, ಕಳಸ, ಜೋಯಿಡಾ, ಸಿದ್ದಾಪುರ, ಕಿರವತ್ತಿ, ಜೇವರ್ಗಿ, ಯಲ್ಲಾಪುರ, ಕೊಪ್ಪ, ಅಣ್ಣಿಗೆರೆ, ಧಾರವಾಡ, ಗೋಕಾಕ,ಸವಣೂರು, ಬೈಲಹೊಂಗಲ, ಸೇಡಂ, ಎಚ್ಡಿ ಕೋಟೆಯಲ್ಲಿ ಮಳೆಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ