ವಿಜಯೋತ್ಸವ ಮುಗಿಸಿ ಹೋಗುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ : ಮೂವರು ವಶಕ್ಕೆ

ಮಂಗಳೂರು : ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ಅನ್ಯಕೋಮಿನ ಯುವಕರ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ನರೇಂದ್ರ ಮೋದಿಯವರು ಸತತ ಮೂರನೇ ಸಲ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬೋಳಿಯಾರ್ ನಲ್ಲಿ ಬಿಜೆಪಿಯು ವಿಜಯೋತ್ಸವ ಮೆರವಣಿಗೆಯನ್ನು ನಡೆಸಿತ್ತು.

ಈ ವೇಳೆ ಅಲ್ಲಿನ ಮಸೀದಿ ಬಳಿ ಕಾರ್ಯಕರ್ತರು ಘೋಷಣೆ ಕೂಗಿದ್ದರು ಎಂದು ಹೇಳಲಾಗಿದೆ. ಅದರ ನಂತರ ಅನ್ಯಕೋಮಿನ ಯುವಕರ ತಂಡವು ಬೋಳಿಯಾರ್ ಸಮಾಧಾನ ಬಾರ್ ಬಳಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಅಡ್ಡಗಟ್ಟಿ ಇಬ್ಬರಿಗೆ ಚೂರಿಯಿಂದ ಇರಿದು, ಒಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು ಎನ್ನಲಾಗಿದೆ. ಇರಿತಕ್ಕೊಳಗಾದ ಹರೀಶಹಾಗೂ ನಂದಕುಮಾರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಿಸಿ ಟಿವಿ ಕ್ಯಾಮೆರಾದಲ್ಲಿ‌ ದಾಖಲಾದ‌ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಹಲವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement