ಬೆಳಗಾವಿ ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ : ಅಲ್ಲಿದ್ದವರಿಂದ ಥಳಿತ

ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದಾಗ ಕೈದಿಯೊಬ್ಬ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಾಗ ನಟೋರಿಯಸ್‌ ಪಾತಕಿ ದಕ್ಷಿಣ ಕನ್ನಡ ಮೂಲದ ಜಯೇಶ ಪೂಜಾರಿ ಪಾಕ್‌ ಪರ ಘೋಷಣೆಗಳನ್ನು ಕೂಗಿದ್ದಾನೆ. ಆಗ ಅಲ್ಲಿದ್ದ ವಕೀಲರು ಮತ್ತು ಸಾರ್ವಜನಿಕರು ಕೈದಿಯನ್ನು ಥಳಿಸಿದ್ದಾರೆ. ನಂತರ ಕೈದಿಯನ್ನು ರಕ್ಷಿಸಿದ ಪೊಲೀಸರು ಅಲ್ಲಿಂದ ಕರೆದೊಯ್ದಿದ್ದಾರೆ.
ಜಯೇಶ ಪೂಜಾರಿ ಈ ಹಿಂದೆ ಹಿಂಡಲಗಾ ಜೈಲಿನಲ್ಲಿ ಒಳಗಿದ್ದುಕೊಂಡೇ ಐಪಿಎಸ್ ಅಧಿಕಾರಿ ಅಲೋಕಕುಮಾಕ ಅವರಿಗೆ ಜೀವ ಬೆದರಿಕೆ ಹಾಕಿದ್ದ‌ ಪ್ರಕರಣದ ವಿಚಾರಣೆಗೆಂದು ಆತನನ್ನು ಕೋರ್ಟಿಗೆ ಕರೆತರಲಾಗಿತ್ತು. ಆಗ ಆರೋಪಿ ಜಯೇಶ ಪೂಜಾರಿ ಪಾಕ್ ಪರ ಘೋಷಣೆ ಕೂಗಿದ್ದಾನೆ. ಈತ ಈ ಹಿಂದೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ೧೦೦ ಕೋಟಿ ರೂ.ಬೇಡಿಕೆ ಇಟ್ಟು ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement