ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾದಂತಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಶರಣಾಗಿದ್ದು, ತಕ್ಷಣವೇ ಇಬ್ಬರನ್ನೂ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ ಅಲಿಯಾಸ್ ಅನು, ಜಗದೀಶ ಅಲಿಯಾಸ್ ಜಗ್ಗು ಎಂದು ಗುರುತಿಸಲಾಗಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ಈ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದರು. ಈಗ ಅವರು ಶರಣಾಗಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ ಎನ್ನಲಾಗಿದೆ.
ಈ ಮೂಲಕ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ 16 ಮಂದಿ ಆರೋಪಿಗಳ ಬಂಧನವಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ.
ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈವರೆಗೆ 14 ಆರೋಪಿಗಳು ಜೈಲುಪಾಲಾಗಿದ್ದು, ಇದೀಗ ಪ್ರಕರಣದ 6ನೇ ಆರೋಪಿ ಜಗ್ಗು ಅಲಿಯಾಸ್ ಜಗದೀಶ, 7ನೇ ಆರೋಪಿ ಅನಿ ಅಲಿಯಾಸ್ ಅನುಕುಮಾರ ಎಂಬ ಮತ್ತಿಬ್ಬರು ಆರೋಪಿಗಳು ಶರಣಾಗಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ