ಜೀವ ಬೆದರಿಕೆ, ವಂಚನೆ ಪ್ರಕರಣ: ಕೇಂದ್ರ ಸಚಿವ ಸೋಮಣ್ಣ ಪುತ್ರ ಅರುಣ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್‌. ಅರುಣ ಸೇರಿದಂತೆ ಮೂವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ.
ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ತೃಪ್ತಿ ಹೆಗ್ಡೆ ಅವರು ದಾಖಲಿಸಿರುವ ಕ್ರಿಮಿನಲ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಡಾ. ಬಿ ಎಸ್‌ ಅರುಣ, ಡಿ ಜೀವನಕುಮಾರ ಹಾಗೂ ಜಿ. ಪ್ರಮೋದ ರಾವ್‌ ಸಲ್ಲಿಸಿದ್ದ ಅರ್ಜಿಯನ್ನು 45ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮೊಹಮ್ಮದ್‌ ಮೊಯಿನುದ್ದೀನ್‌ ಪುರಸ್ಕರಿಸಿದ್ದಾರೆ.
ದೂರಿಗೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಸಂಜಯ ನಗರ ಠಾಣೆಯ ಪೊಲೀಸರು ಅರ್ಜಿದಾರರನ್ನು ಬಂಧಿಸಬಾರದು. ಅರ್ಜಿದಾರರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸಲಾಗಿದೆ ಎಂದು ನ್ಯಾಯಾಲಯ ಆದೇಶ ಮಾಡಿದೆ. ಪ್ರತಿವಾದಿ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಆದೇಶಿಸಲಾಗಿದೆ. ವಿಚಾರಣೆಯನ್ನು ಜೂನ್ 22ಕ್ಕೆ ಮುಂದೂಡಲಾಗಿದೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement