ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಜಾಮೀನು

ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್‌ನಲ್ಲಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.
ಎರಡು ದಿನಗಳ ಕಾಲ ಕೇಜ್ರಿವಾಲ ಮತ್ತು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ ನಂತರ ರಜಾಕಾಲದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಜಾಮೀನು ನೀಡಿ ಆದೇಶಿಸಿದ್ದಾರೆ.
ನ್ಯಾಯಾಧೀಶ ಬಿಂದು ಅವರು ಈ ಪ್ರಕರಣದ ಆದೇಶವನ್ನು ಗುರುವಾರ ಮುಂಜಾನೆ ಕಾಯ್ದಿರಿಸಿದ್ದರು. ಸಂಜೆ ಆದೇಶವನ್ನು ಪ್ರಕಟಿಸಿದ ನಂತರ, ಜಾಮೀನು ಬಾಂಡ್‌ಗೆ ಸಹಿ ಮಾಡುವುದನ್ನು 48 ಗಂಟೆಗಳ ಕಾಲ ಮುಂದೂಡಬಹುದೇ ಎಂದು ಇ.ಡಿ. ಮನವಿ ಮಾಡಿತು. ಆದರೆ, ನ್ಯಾಯಾಧೀಶರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿದರು. ಜಾಮೀನು ಬಾಂಡ್ ಅನ್ನು ಶುಕ್ರವಾರ ಕರ್ತವ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ವಿಚಾರಣಾ ನ್ಯಾಯಾಲಯ ಹೇಳಿದೆ.

ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ರೂಪಿಸಿದ 2021-22ರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಂಚಿನ ಭಾಗವಾಗಿದ್ದ ಆರೋಪದ ಮೇಲೆ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇ.ಡಿ. ಬಂಧಿಸಿತ್ತು.
ಮದ್ಯ ಮಾರಾಟಗಾರರಿಂದ ಪಡೆದ ಕಿಕ್‌ಬ್ಯಾಕ್‌ಗಳನ್ನು ಗೋವಾದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಚುನಾವಣಾ ಪ್ರಚಾರಕ್ಕೆ ಹಣ ನೀಡಲು ಬಳಸಲಾಗಿದೆ ಎಂದು ಇ.ಡಿ. ಆರೋಪಿಸಿದೆ ಮತ್ತು ಕೇಜ್ರಿವಾಲ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿರುವುದು ವೈಯಕ್ತಿಕವಾಗಿ ಮತ್ತು ಅಕ್ರಮ ಹಣ ವರ್ಗಾವಣೆಯ ಅಪರಾಧಕ್ಕೆ ಹೊಣೆಗಾರರಾಗಿದ್ದಾರೆ ಎಂದು ಹೇಳಿದೆ. ಕೇಜ್ರಿವಾಲ ಆರೋಪಗಳನ್ನು ನಿರಾಕರಿಸಿದ್ದು, ಇ.ಡಿ. ಸುಲಿಗೆ ದಂಧೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

ಇದೇ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಮತ್ತು ಸಂಸದ ಸಂಜಯ ಸಿಂಗ್ ಸೇರಿದಂತೆ ಎಎಪಿ ನಾಯಕರನ್ನು ಬಂಧಿಸಲಾಗಿತ್ತು. ಸಂಜಯ ಸಿಂಗ್ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದರೂ ಸಿಸೋಡಿಯಾ ಜೈಲಿನಲ್ಲಿದ್ದಾರೆ.
ಕೇಜ್ರಿವಾಲ್‌ಗೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಲು ಸುಪ್ರೀಂ ಕೋರ್ಟ್‌ ಮೇ ತಿಂಗಳಲ್ಲಿ ಮಧ್ಯಂತರ ಜಾಮೀನು ನೀಡಿತ್ತು. ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಅವರು ಜೂನ್ 2 ರಂದು ಕೇಜ್ರಿವಾಲ್‌ ಮತ್ತೆ ಜೈಲಿಗೆ ಹೋಗಿದ್ದರು.
ವೈದ್ಯಕೀಯ ಕಾರಣ ನೀಡಿ ಏಳು ದಿನಗಳ ಕಾಲ ಮಧ್ಯಂತರ ಜಾಮೀನು ಕೋರಿ ಅರ್ಜಿಯನ್ನೂ ಸಲ್ಲಿಸಿದ್ದರು. ಆದರೆ, ಜೂನ್ 5ರಂದು ವಿಚಾರಣಾ ನ್ಯಾಯಾಲಯ ಇದನ್ನು ತಿರಸ್ಕರಿಸಿತ್ತು.

 

 

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement