ಜಮೀನು ಒತ್ತುವರಿ ಆರೋಪ ; ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಖ್ಯಾತ ಬಾಲಿವುಡ್ ಗಾಯಕ

ಬೆಂಗಳೂರು: ಭೂಮಿ ಒತ್ತುವರಿ ಮಾಡಿದ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗು ಪತಿ ಸುಧೀರ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ, ಸರ್ವೇಯರ್ ಅಧಿಕಾರಿ ಮನೋಹರ ಸೇರಿದಂತೆ 6 ಮಂದಿ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಪ್ರತಿಯನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಅವರು ಮಾಡಿದ್ದಾರೆ. ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಜಾಗವನ್ನು ಲಪಟಾಯಿಸಿದ್ದಾರೆಂದು ದೂರಿನಲ್ಲಿ ಅಲಿ ಉಲ್ಲೇಖಿಸಿದ್ದಾರೆ. ಮಾತ್ರವಲ್ಲ ಈ ಭೂ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ, ಸರ್ವೇಯರ್ ಮನೋಹರ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ. ಇದಕ್ಕೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

2022ರಲ್ಲಿ ಸುಧೀರ ರೆಡ್ಡಿ ಜಮೀನು ಕಬಳಿಸಲು ಪ್ರಯತ್ನಿಸಿದ್ದು, ರೋಹಿಣಿ ಸಿಂಧೂರಿ ಕೂಡಾ ಸಹಾಯ ಮಾಡಿದ್ದರು. ಸ್ಥಳೀಯ ಪೊಲೀಸರಿಗೆ ದೂರು ನೀಡಿದರೂ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂದು ಅಲಿ ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement