ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಹಿನ್ನಡೆಯಾಗಿದ್ದು, ಜಾರಿ ನಿರ್ದೇಶನಾಲಯದ ಅರ್ಜಿಯ ವಿಚಾರಣೆಯ ತನಕ ದೆಹಲಿ ಹೈಕೋರ್ಟ್ ಅವರ ಬಿಡುಗಡೆ ಆದೇಶ ಜಾರಿಗೊಳಿಸುವುದನ್ನು ತಡೆ ಹಿಡಿದಿದೆ.
ಕೇಜ್ರಿವಾಲ್ ಅವರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶವನ್ನು ಜಾರಿಮಾಡಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ಕೆಲವೇ ಗಂಟೆಗಳ ಮೊದಲು ಇ.ಡಿ. ಇಂದು ಶುಕ್ರವಾರ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿರುವುದನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ.
ಅರ್ಜಿಯ ತುರ್ತು ವಿಚಾರಣೆಗೆ ನ್ಯಾಯಮೂರ್ತಿಗಳಾದ ಸುಧೀರಕುಮಾರ ಜೈನ್ ಮತ್ತು ರವೀಂದರ ದುಡೇಜಾ ಅವರನ್ನೊಳಗೊಂಡ ಪೀಠದ ಮುಂದೆ ಇ.ಡಿ ಮನವಿ ಮಾಡಿದೆ. ಇ.ಡಿ ಅರ್ಜಿ ವಿಚಾರಣೆಗೆ ಅಂಗೀಕರಿಸಿರುವ ಪೀಠ ಕೆಲವೇ ಸಮಯದ;ಲ್ಲಿ ವಿಚಾರಣೆ ಆರಂಭಿಸುವುದಾಗಿ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿಯ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿತ್ತು.
ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಆದೇಶವನ್ನು 48 ಗಂಟೆಗಳ ಕಾಲ ತಡೆ ಹಿಡಿಯಬೇಕು ಎಂಬ ಜಾರಿ ನಿರ್ದೇಶನಾಲಯದ ಮನವಿಯನ್ನು ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ತಿರಸ್ಕರಿಸಿದ್ದರು. ₹1 ಲಕ್ಷದ ವೈಯಕ್ತಿಕ ಬಾಂಡ್ ಪಡೆದು ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡುವಂತೆ ನ್ಯಾಯಾಧೀಶರು ಆದೇಶಿಸಿದ್ದರು. ಇಂದು ಕೇಜ್ರಿವಾಲ್ ಬಿಡುಗಡೆಯಾಗುವ ಸಾಧ್ಯತೆ ಇತ್ತು, ಇದರ ಮಧ್ಯೆ ದೆಹಲಿಯ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಇ.ಡಿ ಹೈಕೋರ್ಟ್ ಮೆಟ್ಟಿಲೇರಿದೆ.
ನಿಮ್ಮ ಕಾಮೆಂಟ್ ಬರೆಯಿರಿ