ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣ (Kalaburagi Airport) ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಏರ್ ಪೋರ್ಟ್ ನ ಟರ್ಮಿನಲ್ ಕಟ್ಟಡದಲ್ಲಿ ಬಾಂಬ್ ಇರಿಸಿರುವ ಬಗ್ಗೆ ಇ ಮೇಲ್ ಸಂದೇಶ ಕಳುಹಿಸಲಾಗಿದೆ.
ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಬಾಂಬ್ ನಿಷ್ಕ್ರಿಯ ದಳ ವ್ಯಾಪಕ ಶೋಧನಾ ಕಾರ್ಯ ನಡೆಸುತ್ತಿದೆ. ಭದ್ರತಾ ಪಡೆಯವರೂ ತಪಾಸಣೆ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಸ್ಟಾರ್ ಏರ್ ವಿಮಾನದಲ್ಲೂ ಶೋಧ ತಪಾಸಣೆ ನಡೆದಿದೆ. ಈ ವೇಳೆ ಬೆಂಗಳೂರಿನಿಂದ ವಿಮಾನದಲ್ಲೇ ಕಲಬುರಗಿಗೆ ಬಂದಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಲ್ಲಿಯೇ ಇದ್ದರು.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪ್ರಯಾಣಿಕರೆಲ್ಲರನ್ನು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಳುಹಿಸಲಾಗಿದೆ. ಪ್ರಯಾಣಿಕರನ್ನು ತಪಾಸಣೆ ಒಳಪಡಿಸಲಾಗಿದೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ