ನವದೆಹಲಿ: ಲೋಕಸಭೆಯಲ್ಲಿ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಆದ ಅವರು ಭಾನುವಾರ ಲೋಕಸಭೆಯ ಸದಸ್ಯರಿಗೆ ಪ್ರಮಾಣ ವಚನ ಭೋದನೆ ಮಾಡುತ್ತಿದ್ದು, ಮಂಡ್ಯ ಸಂಸದರಾಗಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಭಾನುವಾರ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಮೊದಲಿಗೆ ಪ್ರಧಾನಿ ಮೋದಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ನಂತರ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಇತರ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕುಮಾರಸ್ವಾಮಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕುಮಾರಸ್ವಾಮಿಯವರು ಪ್ರಮಾಣ ವಚನ ಸ್ವೀಕರಿಸುವಾಗ ಸಾಂಪ್ರದಾಯಿಕ ಉಡುಗೆ-ಬಿಳಿ ಅಂಗಿ ಮತ್ತು ಪಂಚೆ ಧರಿಸಿದ್ದರು.
ಈ ಸಲದ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ‘ಸ್ಟಾರ್’ ಚಂದ್ರು ವಿರುದ್ಧ 2. 84 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ