ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ

ನವದೆಹಲಿ: ರಾಜಭವನದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಂದಾಗಿ ರಾಜಭವನಕ್ಕೆ ಹೋಗಲು ಭಯವಾಗುತ್ತಿದೆ ಎಂದು ಮಹಿಳೆಯರು ತಮ್ಮ ಮುಂದೆ ದೂರು ನೀಡಿದ್ದಾರೆ ಎಂದು ಹೇಳಿದ ಒಂದು ದಿನದ ಬಳಿಕ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಇದೇ ರೀತಿಯ ಹೇಳಿಕೆಗಳಿಗಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯ ಕೆಲವು ನಾಯಕರ ವಿರುದ್ಧ ಬಂಗಾಳ ರಾಜ್ಯಪಾಲರು ಮಾನನಷ್ಟ ಮೊಕದ್ದಮೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. “ರಾಜ್ಯಪಾಲ ಸಿವಿ ಆನಂದ ಬೋಸ್ ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ಗೆ ತೆರಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷದ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ” ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಗುರುವಾರ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ರಾಜಭವನಕ್ಕೆ ಭೇಟಿ ನೀಡಲು ಮಹಿಳೆಯರು ಹೆದರುವ ಸ್ಥಿತಿ ನಿರ್ಮಾಣವಾಗಿದೆ ಎಂದು ನನಗೆ ಹಲವು ದೂರುಗಳು ಬಂದಿವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು, ಆದರೆ ಈ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ರಾಜ್ಯಪಾಲರು ಹೇಳಿಕೆ ನೀಡಿದ್ದಾರೆ. ಹಾಗೂ ಇದರ ನಡುವೆ ನಡೆದ ಹೆಚ್ಚಿನ ಸಭೆಗಳಲ್ಲಿ ಬ್ಯಾನರ್ಜಿ ರಾಜಭವನದ ವಿಚಾರವನ್ನು ಪ್ರಸ್ತಾಪಿಸುತಿದ್ದರು. ಶುಕ್ರವಾರ ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸಿ ಹೇಳಿಕೆ ನೀಡಿರುವ ರಾಜ್ಯಪಾಲರು ಉನ್ನತ ಸ್ಥಾನದಲ್ಲಿದ್ದವರು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement