ಉತ್ತರ ಪ್ರದೇಶ ಕಾಲ್ತುಳಿತದ ಘಟನೆ : ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಸಿಬ್ಬಂದಿ

ಲಕ್ನೋ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 116 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಈ ವೇಳೆ ರಜನೀಶ್ ಎಂಬ ಪೋಲೀಸ್ ಪೇದೆಯೊಬ್ಬರು ಎಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ದುರಂತ ದೃಶ್ಯವನ್ನು ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೂ ನಡೆದಿದೆ ಎಂದು ವರದಿಯಾಗಿದೆ. ಹತ್ರಾಸ್‌ನ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗದಲ್ಲಿ ವಿನಾಶಕಾರಿ ಕಾಲ್ತುಳಿತವು ಹಲವಾರು ಭಕ್ತರ ಸಾವಿಗೆ ಕಾರಣವಾಯಿತು ಮತ್ತು ಅನೇಕರು ಗಾಯಗೊಂಡರು. ಸಂತ್ರಸ್ತರನ್ನು ಎಟಾಹ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಕಂಡುಬಂದ ಹಲವಾರು ಶವಗಳ ದೃಶ್ಯವು ಅನೇಕರನ್ನು ವಿಚಲಿತಗೊಳಿಸಿತು.
ಎಟಾಹ್ ಮೆಡಿಕಲ್ ಕಾಲೇಜಿನಲ್ಲಿ ತುರ್ತು ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬ್ಬಂದಿ ರಜನೀಶ ಮೃತದೇಹಗಳ ರಾಶಿಯನ್ನು ನೋಡಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಅವಘರ್‌ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಭಾಗವಾಗಿದ್ದರು ಮತ್ತು ತುರ್ತು ಕರ್ತವ್ಯಕ್ಕಾಗಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿನ ಭೀಕರ ದೃಶ್ಯಗಳು ಅವರನ್ನು ಕಂಗಡೆಸಿದವು. ಹಾಗೂ ಶಾಕ್‌ನಿಂದ ಹೃದಯಾಘಾತಕ್ಕೆ ಒಳಗಾಗಿ ಅವರು ಮೃತಪಟ್ಟರು.
ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. ಮಂಗಳವಾರ ಬೆಳಗ್ಗೆ ನಡೆದ ಒಂದು ದಿನದ ಸತ್ಸಂಗ ಕಾರ್ಯಕ್ರಮದ ವೇಳೆ ಈ ಘಟನೆ ಸಂಭವಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು.

ಪ್ರಮುಖ ಸುದ್ದಿ :-   ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement