ಗುವಾಹತಿ : ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿ ಶನಿವಾರ ತರಗತಿಯೊಳಗೆ ಕೋಚಿಂಗ್ ಸೆಂಟರ್ನ ಶಿಕ್ಷಕರೊಬ್ಬರನ್ನು ಅವರ ವಿದ್ಯಾರ್ಥಿಯೇ ಚಾಕುವಿನಿಂದ ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯನ್ನು ಶಿವಸಾಗರ ಪಟ್ಟಣದ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. 11 ನೇ ತರಗತಿಯ ವಿದ್ಯಾರ್ಥಿಯನ್ನು ಹಿಂದಿನ ದಿನ ಯಾವುದೋ ವಿಷಯಕ್ಕೆ ಶಿಕ್ಷಕರು ನಿಂದಿಸಿದ್ದರು ಎಂದು ಹೇಳಲಾಗಿದೆ.
ಚೂರಿ ಇರಿತ ಘಟನೆಯ ಮಾಹಿತಿ ಮೇರೆಗೆ ನಾವು ಕೋಚಿಂಗ್ ಸೆಂಟರ್ ತಲುಪಿದೆವು. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ. ತರಗತಿಯಲ್ಲಿ ಸಾಕಷ್ಟು ರಕ್ತವಿದೆ. ಅಲ್ಲಿ ಚಾಕು ಸಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಶಿಕ್ಷಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಪ್ರಕಟಿಸಿದರು.
ಈ ಘಟನೆಯು ದಿನದ ಕೊನೆಯ ಪಿರಿಯಡ್ನಲ್ಲಿ ಸಂಭವಿಸಿದೆ. ಹೀಗಾಗಿ ಆ ವೇಳೆ ಇತರ ಶಿಕ್ಷಕರು ತೆರಳಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. “ನಾವು ವಿದ್ಯಾರ್ಥಿಯನ್ನು ಕರೆದುಕೊಂಡು ಹೋಗಿದ್ದೇವೆ. ಘಟನೆಗೆ ಕಾರಣವೇನು ಎಂದು ನಮಗೆ ಇನ್ನೂ ತಿಳಿದಿಲ್ಲ. ನಾವು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಅಧಿಕಾರಿ ಹೇಳಿದರು.
ಹಿಂದಿನ ದಿನ ಯಾವುದೋ ವಿಷಯಕ್ಕೆ ಶಿಕ್ಷಕರು ಆತನಿಗೆ ಗದರಿಸಿದ್ದರು ಎಂದು ಆರೋಪಿಯ ಸಹಪಾಠಿಯೊಬ್ಬರು ಹೇಳಿದ್ದಾನೆ. ಆರೋಪಿಯು ತರಗತಿಗೆ ಪ್ರವೇಶಿಸಿದಾಗ, ಶಿಕ್ಷಕನು ಆತನನ್ನು ಮತ್ತೆ ದೂಷಿಸಿದನು. ನಂತರ ವಿದ್ಯಾರ್ಥಿ ಶಿಕ್ಷಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸಹಪಾಠಿ ಹೇಳಿಕೊಂಡಿದ್ದಾನೆ.
ನಿಮ್ಮ ಕಾಮೆಂಟ್ ಬರೆಯಿರಿ